ಜನ ಮನದ ನಾಡಿ ಮಿಡಿತ

Advertisement

ಹರೇಕಳ-ಅಡ್ಯಾರ್ ಹೊಸ ಸೇತುವೆಯಲ್ಲಿ ಮೊದಲ ಅಪಘಾತ; ಕಾರುಗಳ ಮುಖಾಮುಖಿ ಢಿಕ್ಕಿ, ಮೂವರಿಗೆ ಗಾಯ…


ಹರೇಕಳ-ಅಡ್ಯಾರ್ ಹೊಸ ಸೇತುವೆಯಲ್ಲಿ ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ನೂತನವಾಗಿ ನಿರ್ಮಾಣಗೊಂಡು ನ್ಯಾಯಾಲಯದಿಂದ ತಡೆಯಾಜ್ಞೆ ಇರುವ ಹರೇಕಳ-ಅಡ್ಯಾರ್ ಅಣೆಕಟ್ಟು ಸೇತುವೆಯಲ್ಲಿ ಸಂಭವಿಸಿದ ಮೊದಲ ಅಪಘಾತ ಇದಾಗಿದೆ.


ಪುತ್ತೂರು ಕಡೆಯಿಂದ ಅಡ್ಯಾರ್ ನತ್ತ ಬರುತ್ತಿದ್ದ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಆಲ್ಟೋ ಕಾರು ಹಾಗೂ ಎದುರಿನಿಂದ ಬಂದ ಇಕೋ ಸ್ಪೋಟ್ಸ್ 9 ಕಾರುಗಳ ಮಧ್ಯೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮಹಿಳೆ, ಸಹಪ್ರಯಾಣಿಕರು ಹಾಗೂ ಇನ್ನೊಂದು ಕಾರಿನಲ್ಲಿದ್ದ ಚಾಲಕ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡ್ಯಾಂ ನಿಂದಾಗಿ ಸ್ಥಳೀಯರ ಜಾಗ ಮುಳುಗಡೆಯಾಗುವ ಭೀತಿಯಿದ್ದರೂ, ಸಂಬಂಧಪಟ್ಟ ಇಲಾಖೆ ಜಾಗಗಳನ್ನು ಸ್ವಾಧೀನ ಮಾಡದೇ ಇರುವುದರಿಂದ , ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ. ಹಾಗಾಗಿ ಸೇತುವೆ ನಿರ್ಮಾಣಗೊಂಡು ವರ್ಷ ಕಳೆದರೂ ಅಧಿಕೃತ ಉದ್ಘಾಟನೆ ಇಂದಿಗೂ ಆಗಿಲ್ಲ.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!