ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಭೂಕುಸಿತ ಉಂಟಾಗಿದೆ. ಮರಗಳು ಧರೆಗುರುಳಿದ್ದು, ಕಾಲುಸಂಕ ಮುಳುಗಡೆಯಾಗಿದೆ.
ಶೃಂಗೇರಿ ತಾಲೂಕಿನ ಮೇಲು ಬೈಲು ಗ್ರಾಮದಲ್ಲಿ ಮಣ್ಣು ಕುಸಿದು ಆರು ಮನೆಗಳು ಅಪಾಯಕ್ಕೆ ಸಿಲುಕಿವೆ.
ಉತ್ತಮೇಶ್ವರ ರಸ್ತೆ ಕಾಮಗಾರಿ ಇಲಾಖೆಯಿಂದ ಗ್ರಾಮ ಸಡಖ್ ಯೋಜನೆಯಲ್ಲಿ ರಸ್ತೆ ನಿರ್ಮಾಣ ಮಾಡುವಾಗ ಇಲ್ಲಿ ಮಣ್ಣು ತೆಗೆಯಲಾಗಿತ್ತು. ಇದೇ ರಸ್ತೆಯ ಮತ್ತೊಂದು ಕಡೆಯಲ್ಲಿ ಕುಸಿತ ಉಂಟಾಗಿದೆ. ಸ್ಥಳಕ್ಕೆ ಶೃಂಗೇರಿ ತಹಶೀಲ್ದಾರ್ ಗೌರಮ್ಮ ಹಾಗೂ ಅರ್.ಐ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು, ಕಳೆದ ಎರಡು ದಿನದಿಂದ ಮೇಲ್ಪಾಲ್ ಸುತ್ತಮುತ್ತ ಭಾರಿ ಮಳೆ ಸುರಿಯುತ್ತಿದೆ. ಮನೆಯ ಮುಂಗಡ ನಿಂತಿದ್ದ ಸಂದರ್ಭ ಧರೆ ಕುಸಿತ ಉಂಟಾಗಿದ್ದು, ವ್ಯಕ್ತಿಯೊಬ್ಬರು ಅದೃಷ್ಟವಶಾತ್ ಪಾರಾದ ಘಟನೆ ಎನ್. ಆರ್. ಪುರ ತಾಲೂಕಿನ ಮೇಲ್ಪಾಲ್ನಲ್ಲಿ ನಡೆದಿದೆ. ಮೇಲ್ಪಾಲ್ ಮೂಲದ ಶಶಿಕುಮಾರ್ ಎಂಬುವರ ಮನೆ ಮುಂದೆ ಭೂಮಿ ಕುಸಿದಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.
ತುಂಗಾ, ಭದ್ರಾ, ಹೇಮಾವತಿ ನದಿಗಳು ರಭಸದಿಂದ ಹರಿಯುತ್ತಿದ್ದು, ದಿನದಿಂದ ದಿನಕ್ಕೆ ತುಂಗಾ ನದಿ ನೀರಿನ ಮಟ್ಟ ಹೆಚ್ಚಾಗುತ್ತಿದೆ.
ತುಂಗಾ ನದಿಯಲ್ಲಿ ಮರದ ದಿಮ್ಮಿಗಳು ಕೊಚ್ಚಿಕೊಂಡು ಬರಲು ಪ್ರಾರಂಭವಾಗಿದೆ. ಶೃಂಗೇರಿ ತಾಲೂಕಿನ ಕೆರೆಕಟ್ಟೆ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಶಾರಾದಾಂಬೆ ದೇವಾಲಯದ ತುಂಗಾ ನದಿ ತಟದಲ್ಲಿರುವ ಕಪ್ಪೆ ಶಂಕರ ದೇವಾಲಯ ಮುಳುಗಡೆಯಾಗಿದೆ. ಭಾರಿ ಮಳೆ ಹಿನ್ನೆಲೆ ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದ್ದು, ಮಲೆನಾಡಿನ 34 ಗ್ರಾಮ ಪಂಚಾಯಿತಿಯ 77 ಗ್ರಾಮಗಳಿಗೆ ಅಪಾಯವಿದೆ ಎಂದು ಗುರುತು ಮಾಡಲಾಗಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…