ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಸ್ವರ್ಣ ನದಿಯ ಸೇತುವೆ ದಂಡೆಗೆ ಡಿಕ್ಕಿ ಹೊಡೆದ ಬಸ್: ದೊಡ್ಡ ದುರಂತದಿಂದ ಪ್ರಯಾಣಿಕರು ಪಾರು

ಉಡುಪಿ: ಖಾಸಗಿ ಬನ್ನೊಂದು ಸೇತುವೆ ಬದಿಯ ದಂಡೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಕಲ್ಯಾಣಪುರ ಸೇತುವೆಯಲ್ಲಿ ಸಂಭವಿಸಿದೆ. ಬಸ್ ನದಿಯಲ್ಲಿ ಮುಳುಗುವ ಅಪಾಯವಿದ್ದು, ಅದೃಷ್ಟವಶಾತ್ ಯಾವುದೇ ದುರ್ಘಟನೆ ಸಂಭವಿಸಿಲ್ಲ. ಬಹಳ ದೊಡ್ಡ ದುರಂತದಿಂದ ಪ್ರಯಾಣಿಕರು ಪಾರಾಗಿದ್ದಾರೆ.

ಉಡುಪಿಯಿಂದ ಬ್ರಹ್ಮಾವರದ ಕಡೆಗೆ ಚಲಿಸುವ ಬಸ್ ಸ್ವರ್ಣ ನದಿಯ ಕಲ್ಯಾಣಪುರ ಸೇತುವೆಯ ಗರ್ಡ‌ರ್ ರಭಸದಿಂದ ಗುದ್ದಿದೆ. ಇದರ ಪರಿಣಾಮ ಸುರಕ್ಷಾ ಗರ್ಡರ್ ಮುರಿದಿದ್ದು, ಬಸ್ ಅಂಚಿನಲ್ಲಿ ನಿಂತಿದೆ. ಪ್ರಯಾಣಿಕರು ನದಿಗೆ ಬಿದ್ದು ಮುಳುಗಡೆ ಆಗುವ ಸನ್ನಿವೇಶದ ಅಪಾಯದಿಂದ ಪಾರಾಗಿದ್ದಾರೆ.
ಅದೇ ಸಮಯ ಸೇತುವೆ ಕೆಳಗಡೆ ದೋಣಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಶಂಕರ ಎಂಬವರ ಮೇಲೆ ಸಿಮೆಂಟು ಕಂಬದ ತುಂಡು ಮುರಿದು ಬಿದ್ದಿದೆ. ಅವರ ಕೈಗೆ ಗಾಯವಾಗಿದ್ದು ಚಿಕಿತ್ಸೆ ಪಡೆದಿದ್ದಾರೆ. ಕಲ್ಯಾಣಪುರ ಸೇತುವೆ 1963ರಲ್ಲಿ ನಿರ್ಮಾಣವಾಗಿದ್ದು 6 ದಶಕಗಳಷ್ಟು ಹಳೆಯದಾಗಿದ್ದು ಇಲ್ಲಿ ಬಹಳಷ್ಟು ಅಪಘಾತಗಳು ಆಗಾಗ್ಗೆ ಸಂಭವಿಸುತ್ತಿವೆ.
ಸೇತುವೆಯ ಅಡಿಯಲ್ಲಿ ಅಲ್ಲಲ್ಲಿ ಕಾಂಕ್ರೀಟ್ ಬಿರುಕು ಬಿಟ್ಟಿದೆ. ಸೇತುವೆಯನ್ನು ಅಡಿ ಭಾಗದಲ್ಲೂ ದುರಸ್ಥಿ ಮಾಡಬೇಕಾಗಿದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!