ಉಡುಪಿ: ಖಾಸಗಿ ಬನ್ನೊಂದು ಸೇತುವೆ ಬದಿಯ ದಂಡೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಕಲ್ಯಾಣಪುರ ಸೇತುವೆಯಲ್ಲಿ ಸಂಭವಿಸಿದೆ. ಬಸ್ ನದಿಯಲ್ಲಿ ಮುಳುಗುವ ಅಪಾಯವಿದ್ದು, ಅದೃಷ್ಟವಶಾತ್ ಯಾವುದೇ ದುರ್ಘಟನೆ ಸಂಭವಿಸಿಲ್ಲ. ಬಹಳ ದೊಡ್ಡ ದುರಂತದಿಂದ ಪ್ರಯಾಣಿಕರು ಪಾರಾಗಿದ್ದಾರೆ.
ಉಡುಪಿಯಿಂದ ಬ್ರಹ್ಮಾವರದ ಕಡೆಗೆ ಚಲಿಸುವ ಬಸ್ ಸ್ವರ್ಣ ನದಿಯ ಕಲ್ಯಾಣಪುರ ಸೇತುವೆಯ ಗರ್ಡರ್ ರಭಸದಿಂದ ಗುದ್ದಿದೆ. ಇದರ ಪರಿಣಾಮ ಸುರಕ್ಷಾ ಗರ್ಡರ್ ಮುರಿದಿದ್ದು, ಬಸ್ ಅಂಚಿನಲ್ಲಿ ನಿಂತಿದೆ. ಪ್ರಯಾಣಿಕರು ನದಿಗೆ ಬಿದ್ದು ಮುಳುಗಡೆ ಆಗುವ ಸನ್ನಿವೇಶದ ಅಪಾಯದಿಂದ ಪಾರಾಗಿದ್ದಾರೆ.
ಅದೇ ಸಮಯ ಸೇತುವೆ ಕೆಳಗಡೆ ದೋಣಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಶಂಕರ ಎಂಬವರ ಮೇಲೆ ಸಿಮೆಂಟು ಕಂಬದ ತುಂಡು ಮುರಿದು ಬಿದ್ದಿದೆ. ಅವರ ಕೈಗೆ ಗಾಯವಾಗಿದ್ದು ಚಿಕಿತ್ಸೆ ಪಡೆದಿದ್ದಾರೆ. ಕಲ್ಯಾಣಪುರ ಸೇತುವೆ 1963ರಲ್ಲಿ ನಿರ್ಮಾಣವಾಗಿದ್ದು 6 ದಶಕಗಳಷ್ಟು ಹಳೆಯದಾಗಿದ್ದು ಇಲ್ಲಿ ಬಹಳಷ್ಟು ಅಪಘಾತಗಳು ಆಗಾಗ್ಗೆ ಸಂಭವಿಸುತ್ತಿವೆ.
ಸೇತುವೆಯ ಅಡಿಯಲ್ಲಿ ಅಲ್ಲಲ್ಲಿ ಕಾಂಕ್ರೀಟ್ ಬಿರುಕು ಬಿಟ್ಟಿದೆ. ಸೇತುವೆಯನ್ನು ಅಡಿ ಭಾಗದಲ್ಲೂ ದುರಸ್ಥಿ ಮಾಡಬೇಕಾಗಿದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…