


ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾದ ಬೆಳ್ಳಾಡಿ ಅಶೋಕ್ ಶೆಟ್ಟಿ,ಮೆರಿಟ್ ಹಾಸ್ಪಿಟಲಿಟಿ ಸರ್ವಿಸಸ್ ಪ್ರೈ. ಲಿ. ಮುಂಬೈ, ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಹಾಗೂ ಕೋಶಾಧಿಕಾರಿ ಶ್ರೀ ಉಳ್ತೂರು ಮೋಹನದಾಸ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಒಕ್ಕೂಟಕ್ಕೆ ಮಹಾ-ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ. ಇವರು ಈ ಹಿಂದೆ ಒಕ್ಕೂಟದ ನಿರ್ದೇಶಕರಾಗಿದ್ದರು ಇನ್ನೂ ಮುಂದೆ ಮಹಾ-ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪರವಾಗಿ ಕೃತಜ್ಞತೆಗಳು. ಕಟೀಲು ದುರ್ಗಾಪರಮೇಶ್ವರಿ ಅಮ್ಮನ ದಯೆ ನಿಮ್ಮ ಮೇಲೆ ಸದಾ ಇರಲಿ ಎಂದು ಮನಸಾರೆ ಪ್ರಾರ್ಥಿಸುವೆವು.



