ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಆಶ್ರಯದಲ್ಲಿ ಸ್ವಸ್ಥ ಭಾರತಕ್ಕಾಗಿ ಸ್ವಚ್ಛ ಪರಿಸರ ಎಂಬ ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣವು ಪದವಿ ವಿಭಾಗದ ಆಜಾದ್ ಭವನದಲ್ಲಿ ನಡೆಯಿತು. ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿಯವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದರು.
ಪ್ರಾರಂಭದಲ್ಲಿ ವಿದ್ಯಾರ್ಥಿಗಳಿಂದ ಸರಸ್ವತಿ ವಂದನೆ ನಡೆದಿದ್ದು ನಂತರ ವಾತಾವರಣ ಶುದ್ಧಗೊಳಿಸುವ ಅಗ್ನಿಹೋತ್ರದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮಾಜಸೇವಕಿ, ಅದಮ್ಯ ಚೇತನಾ ಟ್ರಸ್ಟ್ ನ ಸಂಸ್ಥಾಪಕಿ, ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಪತ್ನಿ ಡಾ. ತೇಜಸ್ವಿನಿ ಇವರು ಮಾತನಾಡಿ, ಬಳಕೆಯ ಪ್ರತಿಯೊಂದು ವಸ್ತುವಿನ ಮೂಲವನ್ನು ಅರಿತು, ಪರಿಸರ ಸ್ನೇಹಿಯೇ ಎಂಬುದಾಗಿ ವಿಚಾರ ಮಾಡಿ ಬಳಸಬೇಕು, ಪ್ರತಿಯೊಬ್ಬರೂ ಪರಿಸರ ರಕ್ಷಣೆಯ ಚಿಂತನೆಯನ್ನು ಮಾಡಬೇಕು ಎಂದು ಹೇಳಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕ ಡಾ.ಪ್ರಭಾಕರ ಭಟ್ ಕಲ್ಲಡ್ಕಅವರು, ಪ್ರತಿಯೊಂದು ಜೀವಿಯೂ ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ. ಆದ್ದರಿಂದ ಪ್ರಕೃತಿಯ ನಾಶದಿಂದ ಸರ್ವನಾಶ, ಎಂದು ಎಚ್ಚರಿಸುವ ಮೂಲಕ ಪ್ರಸ್ತಾವಿಕ ನುಡಿಗಳನ್ನಾಡಿದರು. ಪ್ರಾಂಶುಪಾಲ ಕೃಷ್ಣ ಪ್ರಸಾದ್ ಕಾಯರಕಟ್ಟೆ ಸ್ವಾಗತಿಸಿದರು.
ವಿದ್ಯಾರ್ಥಿನಿ ಪ್ರತೀಕಾ ಕಾರ್ಯಕ್ರಮ ನಿರ್ವಹಿಸಿದರು.
ಉದ್ಘಾಟನಾ ಸಮಾರಂಭದ ನಂತರಅದೇ ವೇದಿಕೆಯಲ್ಲಿ ಪರಿಸರ ಹಿತಚಿಂತನೆಯ ವಿಚಾರವಾಗಿ ೫ ಗೋಷ್ಠಿಗಳು ನಡೆದವು. ಮೊದಲನೇ ಗೋಷ್ಠಿಯಲ್ಲಿ “ಜಲ ಮತ್ತು ಮರಜಾಗೃತಿಯ ದೇಸಿ ದಾರಿ” ಎಂಬ ವಿಷಯದ ಕುರಿತು ಪರಿಸರ ಚಿಂತಕರು ಮತ್ತು ಬರಹಗಾರ ಶಿವಾನಂದ ಕಳವೆಯವರು ವಿಷಯ ಮಂಡಿಸಿದರು. ಎರಡನೇ ಗೋಷ್ಠಿಯಲ್ಲಿ “ಆರಾಧನೆ ಮತ್ತು ನಂಬಿಕೆಗಳಲ್ಲಿ ಪರಿಸರ ಉಳಿಕೆಯ ದೃಷ್ಟಿ” ವಿಷಯವನ್ನು ಪುತ್ತೂರಿನ ಸರಕಾರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ನರೇಂದ್ರ ರೈ ದೇರ್ಲ ಇವರು ಮಂಡಿಸಿದರು. ಮೂರನೇ ಅವಧಿಯ ಸಂಪನ್ಮೂಲ ವ್ಯಕ್ತಿ ಕರ್ನಾಟಕ ರಾಜ್ಯ ಪರಿಸರ ಆಘಾತ ಅಂದಾಜಿಕರಣ ಪ್ರಾಧಿಕಾರ ಬೆಂಗಳೂರಿನ ನಿಕಟಪೂರ್ವಚಅಧ್ಯಕ್ಷ ಡಾ.ಎಂ.ಆರ್ ಶ್ರೀಹರ್ಷ ಇವರು “ಸಮಗ್ರತ್ಯಾಜ್ಯ ನಿರ್ವಹಣೆ” ಕುರಿತು ವಿವರಿಸಿದರು. ನಾಲ್ಕನೇ ಅವಧಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ವೃತ್ತಿಯಲ್ಲಿ ಇದ್ದು, ಪ್ರಸ್ತುತ ಪೂರ್ಣಾವಧಿ ಕೃಷಿಕ ವಸಂತ ಕಜೆಯವರು “ಮಣ್ಣುಮತ್ತುಆಹಾರವಿಷಮುಕ್ತವಾಗುವತ್ತ” ಎಂಬ ವಿಷಯವನ್ನು ಪ್ರಸ್ತುತಪಡಿಸಿದರು.ಕೊನೆಯ ಗೋಷ್ಠಿಯಲ್ಲಿ ಪರ್ಯಾವರಣ ಸಂರಕ್ಷಣಗತಿವಿಧಿಯ ಪ್ರಾಂತ ಸಂಯೋಜಕ ವೆಂಕಟೇಶ್ ಸಂಗನಾಳ ಇವರು “ಪರಿಸರ ಸ್ನೇಹಿ ಜೀವನ ಪದ್ಧತಿ” ಯ ಬಗ್ಗೆ ಮಂಡಿಸಿದರು. ಕು.ಗಾಯತ್ರೀ ಪರಿಸರದಕುರಿತಾದ ವೈಯಕ್ತಿಕ ಗೀತೆಯನ್ನು ಹಾಡಿದರು.
ಒಟ್ಟು ೪೫ ವಿದ್ಯಾಸಂಸ್ಥೆಗಳಿಂದ ೨೨೯ ಶಿಕ್ಷಕರು, ೪೮೭ ವಿದ್ಯಾರ್ಥಿಗಳು, ೫೧ ಇತರ ಪ್ರತಿನಿಧಿಗಳು ಸೇರಿಒಟ್ಟು 767 ಮಂದಿ ಭಾಗವಹಿಸಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…