ದಕ್ಷಿಣ ಕನ್ನಡ : ವಿಸ್ಮಯವಾಣಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ. ಬಿ. ವಾಸುದೇವ್ ಇವರು ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿಗೆ ರಾಷ್ಟ್ರೀಯ ಗೌರವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಮಾನವ ಹಕ್ಕುಗಳ ಮಾಹಿತಿ ಸಮಿತಿಯಲ್ಲಿ ರಾಜ್ಯಕಾರ್ಯಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿದ ಡಾ. ಬಿ.ವಾಸುದೇವ ಇವರ ಉತ್ತಮ ಸೇವೆಯನ್ನ ಗುರುತಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿಯು ಪದೋನ್ನತಿ ನೀಡಿ ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿಯ ರಾಷ್ಟ್ರಿಯ ಗೌರವಾಧ್ಯಕ್ಷರನ್ನಾಗಿ ನೇಮಿಸಿದೆ.
ವಿಸ್ಮಯವಾಣಿ ಪತ್ರಿಕೆಯ ಪ್ರಧಾನ ಸಂಪಾದಕರಾಗಿ, ಜೊತೆಗೆ, ಕರ್ನಾಟಕ ಸಮರಸೇನೆ ಸ್ಥಾಪಕ ಕಾರ್ಯಾಧ್ಯಕ್ಷರೂ ಆಗಿರುವ ವಾಸುದೇವ ಇವರು, ಎಲ್ಲರೊಂದಿಗೂ ಬೆರೆಯುವ ಜನಪರ ವ್ಯಕ್ತಿಯಾಗಿದ್ದು, ಕಳಂಕ ರಹಿತ, ಜನಪರ ಹಿತ ಆದರ್ಶ ವ್ಯಕ್ತಿಯಾಗಿದ್ದು, ಸಮಾಜಮುಖಿ ಚಿಂತನೆಯುಳ್ಳ, ಇವರು ಇತರರಿಗೆ ಮಾದರಿ ವ್ಯಕ್ತಿ ಎನಿಸಿಕೊಂಡಿದ್ದಾರೆ.
ಸಮಾಜ ಸೇವಕರಾಗಿ, ಚಲನಚಿತ್ರ ನಟರಾಗಿ, ಪತ್ರಕರ್ತರ ಒಡನಾಡಿಯಾಗಿ, ಸಮಾಜದ ಕಷ್ಟಕ್ಕೆ ಸದಾ ಸ್ಪಂದಿಸುವ ಸೃಜನಶೀಲ ಮನೋಭಾವದ ಯೋಗ್ಯರೊಬ್ಬರಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿಗೆ ರಾಷ್ಟ್ರೀಯ ಗೌರವ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ವಿಸ್ಮಯವಾಣಿ ಬಳಗ ಸಹಿತ ನಾಡಿನ ಹಲವಾರು ಸಂಘಟನೆಗಳು ಮತ್ತು ನಾಗರಿಕರು ಸಂತಸ ವ್ಯಕ್ತಪಡಿಸಿದ್ದಾರೆ
ಸರಳ ಸಜ್ಜನಿಕೆಯ ವ್ಯಕ್ತಿಯಾದ ವಾಸುದೇವ ಇವರು ಎಲ್ಲರೊಂದಿಗೂ ಬೆರೆಯುವ ಮನೋಭಾವದವರಾಗಿದ್ದು, ನಾಡಿನಾದ್ಯಂತ ಹಲವು ಸಂಘ-ಸಂಸ್ಥೆಗಳಲ್ಲಿ ಸದಸ್ಯರಾಗಿದ್ದು, ಕರ್ನಾಟಕ ರಾಜ್ಯ ಸಹಿತ ದೇಶದ ಹಲವು ಭಾಗಗಳಲ್ಲಿ ಇವರ ಆದರ್ಶ ಸಮಾಜ ಸೇವೆಯನ್ನು ಗುರುತಿಸಿ ಗೌರವ ಸನ್ಮಾನಗಳಾಗಿವೆ.
ಕನ್ನಡ ನಾಡು ನುಡಿ ಜಲ ನೆಲ ಇವುಗಳ ರಕ್ಷಣೆಗಾಗಿ ಸದಾ ಮಿಡಿಯುವ ಇವರು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಕೂಟ ಇದರ ಸಂಸ್ಥಾಪಕರಾಗಿ ಜೊತೆಗೆ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಡಾ.ಬಿ.ವಾಸುದೇವ ಇವರಿಂದ ಇನ್ನಷ್ಟು ಉತ್ತಮ ಸಮಾಜ ಸೇವೆ ದೊರೆಯಲಿ ಎಂದು ನಾಡಿನ ಜನರು ಹಾರೈಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…