ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ದಾಖಲೆ ಪತ್ರಕ್ಕಾಗಿ ಬರೋಬ್ಬರಿ 9 ಬಾರಿ ಅಲೆದಾಟ..??

ಕಡಬ: ಬ್ಯಾಂಕ್ ಲೋನ್ ಪಡೆದು ಮನೆ ಕಟ್ಟುವ ಸಲುವಾಗಿ ಅಗತ್ಯ ದಾಖಲೆ ಪತ್ರಕ್ಕಾಗಿ ಎರಡು ದಿನದಲ್ಲಿ ಬರೋಬ್ಬರಿ  ಒಂಭತ್ತು ಬಾರಿ ವ್ಯಕ್ತಿಯೊಬ್ಬರನ್ನು  ಅಲೆದಾಡಿಸಿದ  ಪಟ್ಟಣ ಪಂಚಾಯತ್  ಮಹಿಳಾ ಸಿಬ್ಬಂದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಜೂ.5 ರಂದು ಸಂಜೆ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ನಡೆದಿದೆ.ಈ ಕುರಿತ ಮಾತಿನ ಚಕಮಕಿಯ ವೀಡಿಯೋ ವೈರಲ್ ಆಗಿದೆ.

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಗಿರೀಶ್ ಕೋಡಿಬೈಲು ಅವರು ಮನೆ ನಿರ್ಮಾಣಕ್ಕಾಗಿ ಸಾಲ ಪಡೆಯುವ ಸಲುವಾಗಿ ಬ್ಯಾಂಕ್ ಗೆ ಅಗತ್ಯ ದಾಖಲೆ ಪತ್ರ ಸಲ್ಲಿಸಬೇಕಾಗಿತ್ತು. ಪ.ಪಂ ನಿಂದ ನೀಡುವ ನಮೂನೆ 3 ದಾಖಲೆಯೊಂದರಲ್ಲಿ ಸಿಬ್ಬಂದಿಗಳ ಬೇಜವ್ದಾರಿಯಿಂದ ರಸ್ತೆ ದಿಕ್ಕನ್ನು ತಪ್ಪಾಗಿ ನಮೂದಿಸಿದ್ದರು .    ಹೀಗಾಗಿ ಕೂಡಲೇ ಸರಿಪಡಿಸಿಕೊಂಡು ಬರುವಂತೆ ಬ್ಯಾಂಕ್ ನಲ್ಲಿ ಹೇಳಿದ್ದರು. ಈ ಬಗ್ಗೆ ಪಟ್ಟಣ ಪಂಚಾಯತ್ ನಲ್ಲಿ ಮಂಗಳವಾರ ಮುಂಜಾನೆ ವಿಚಾರಿಸಿದ ವಿವಿಧ ಸಮಯ ನೀಡಿ ನಾಲ್ಕು ಬಾರಿ ಅಲೆದಾಡಿಸಿ ಮರುದಿನ ಬರುವಂತೆ  ಮಹಿಳಾ ಸಿಬ್ಬಂದಿ ( ಬಿಲ್ ಕಲೆಕ್ಟರ್) ಹೇಳಿದ್ದರು,  ಅಲ್ಲದೆ ತೆರಿಗೆಯನ್ನು ಪಾವತಿಸಲು ತಿಳಿಸಿದಂತೆ ಹಣ ಪಾವತಿಸಿದ್ದರು . ಬುಧವಾರವೂ ಕಚೇರಿಗೆ ಹೋಗಿ ವಿಚಾರಿಸಿದಾಗ  ಮತ್ತೆ ಬೇರೆ ಬೇರೆ ಸಮಯ ನೀಡಿ ಐದು ಬಾರಿ ಅಲೆದಾಡಿಸಿ ಒಟಿಪಿ ಬಾರದೆ ಆಗುವುದಿಲ್ಲ ಎಂದು ಹೇಳಿ  ಗುರುವಾರ ಬರುವಂತೆ ಮಹಿಳಾ ಸಿಬ್ಬಂದಿ ಸೂಚಿಸಿದ್ದರು.

ದಾಖಲೆಗಾಗಿ ಬಂದ ವ್ಯಕ್ತಿ ಅಳುತ್ತಾ ಹೋದ್ರು:  ಬ್ಯಾಂಕ್ ಗೆ ನಿಗದಿತ ಸಮಯದಲ್ಲಿ ದಾಖಲೇ ಪತ್ರ ಸಲ್ಲಿಸಲೇ ಬೇಕಾದ ಅನಿವಾರ್ಯತೆ ಇರುವುದರಿಂದ ಅಲೆದಾಟ ಮಾಡಿ ನೊಂದ ಗಿರೀಶ್ ಅವರು ದಿಕ್ಕು ತೋಚದೆ  ಅಳುತ್ತಾ ಭೀಮ್ ಆರ್ಮಿ ಸಂಘಟನೆಯ ಕಡಬ ತಾಲೂಕು  ಅಧ್ಯಕ್ಷ ರಾಘವ ಕಳಾರ ಗಮನಕ್ಕೆ ತಂದಿದ್ದರು. ಬುಧವಾರ ಸಂಜೆ ಕಚೇರಿಗೆ ಹೋಗಿ ವಿಚಾರಿಸಿದಾಗ ಉಡಾಫೆಯಿಂದ ಮಾತನಾಡಿದನ್ನು ಗಮನಿಸಿ ರಾಘವ  ಅವರು ತೀವ್ರ ತರಾಟೆಗೆ ತೆಗೆದುಕೊಂಡರು.  ಈ ವೇಳೆ  ಹಣ ಕೊಟ್ಟರೆ ಒಂದೇ ದಿನದಲ್ಲಿ ದಾಖಲೆ ಪತ್ರ ನೀಡುವ ನೀವು ಬಡವರನ್ನು ಸತಾಯಿಸುತ್ತಿರುವುದಾಗಿ ಏರು ಧ್ವನಿಯಲ್ಲಿ ಮಾತನಾಡಿ ಇಂದೇ ಕೊಡುವಂತೆ ಪಟ್ಟು ಹಿಡಿದರು. ಈ ವೇಳೆ ಮರು ಜಿಪಿಎಸ್ ಮಾಡಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದು ಇದರಿಂದ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಯಿತು. ಅಲ್ಲದೆ ಹಣ ಬೇಕಿದ್ದರೆ ಹೇಳಲಿ ಒಳ್ಳೆಯ ಜಾಗದಲ್ಲಿ ತಂದು ಕೊಡುತ್ತೇನೆ ಎಂದು ಹೇಳುವುದು ವೀಡಿಯೋದಲ್ಲಿದೆ.

ಮನೆಗೆ ಹೋದ ಸಿಬ್ಬಂದಿಯನ್ನುಕಚೇರಿಗೆ ಸಿಒ ಕಾರು ಕಳುಹಿಸಿದ್ರು: ಪಟ್ಟಣ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಕಾರಣ ದಿಕ್ಕು ತೋಚದೆ ಇವತ್ತೆ ಮಾಡಿಕೊಡುವ ಭರವಸೆ ನೀಡಿದರು. ಇದರಿಂದ ಸಾಯಂಕಾಲ ಮನೆಗೆ ಹೋಗಿದ್ದ ಬಿಳಿನೆಲೆಯ ಮತ್ತೋರ್ವ ಮಹಿಳಾ ಸಿಬ್ಬಂದಿಯನ್ನು ಬರ ಹೇಳಿದ್ದರು.ಹೀಗಾಗಿ ತುರ್ತಾಗಿ ಮುಖ್ಯಾಧಿಕಾರಿಯ ಕಾರನ್ನು ಬಿಳಿನೆಲೆಗೆ ಕಳುಹಿಸಿ ಸಂಜೆ ಸುಮಾರು 7:15ರ ಹೊತ್ತಿಗೆ ಕಚೇರಿಗೆ ಸಿಬ್ಬಂದಿ ಆಗಮಿಸಿದರು.  ನಂತರ ಸರಿ ಸುಮಾರು 8:00ಯ ಹೊತ್ತಿಗೆ ತಿದ್ದುಪಡಿಗೊಂಡ ನಮೂನೆ 3 ದಾಖಲೆ ಪತ್ರವನ್ನು ಯಾವುದೇ ಒಟಿಪಿ ಇಲ್ಲದೆ,ಜಿಪಿಯಸ್ ಮಾಡದೆ ಸಿದ್ದಪಡಿಸಿ  ನೀಡಿದರು.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!