ಪರಿಶಿಷ್ಟ ಜಾತಿ ಮುಂಡಾಳ ಸಮಾಜ ಬಾಂಧವರ ಸಾಮಾಜಿಕ,ಶೈಕ್ಷಣಿಕ ಮತ್ತು ಔದ್ಯೋಗಿಕ ವಿಚಾರಧಾರೆಗಳಿಗೆ ಸಹಕಾರಿಯಾಗುವಂತೆ ಆಸುಪಾಸಿನ ಗ್ರಾಮಗಳ ಸಮಾಜ ಬಾಂಧವರ ಉಪಸ್ಥಿತಿಯಲ್ಲಿ ನೂತನ ಕಟ್ಟಡ ಸಮಿತಿಯನ್ನು ಶ್ರೀ ಓಂಕಾರೇಶ್ವರಿ ಮಂದಿರ ತೋಕೂರು ಇದರ ಅಧ್ಯಕ್ಷರಾದ ಸದಾಶಿವ ಕುಂದರ್ ರವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.

ಕಟ್ಟಡ ಸಮಿತಿಯ ನೂತನ ಅಧ್ಯಕ್ಷರಾಗಿ ಸದಾಶಿವ ಕುಂದರ್ ಅವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಶ್ರೀಧರ ಕೆಮ್ರಾಲ್, ಪ್ರಧಾನ ಕಾರ್ಯದರ್ಶಿಯಾಗಿಹಿಮಕರ್, ಜೊತೆ ಕಾರ್ಯದರ್ಶಿಯಾಗಿ ಸೀತಾರಾಮ್ ಸಾಲ್ಯಾನ್, ಕೋಶಾಧಿಕಾರಿಯಾಗಿ ಶ್ರೀ ಶಂಕರ್ ಮಾಸ್ಟರ್, ಆಂತರಿಕ ಲೆಕ್ಕ ಪರಿಶೋಧಕರಾಗಿ ಸುಕುಮಾರ್ ಮಾಸ್ಟರ್, ಸಮಿತಿ ಸದಸ್ಯರಾಗಿ ಸಂಕಪ್ಪ ಎಂ,ಗೌರೀಶ್, ಸಂಜೀವ ಕರ್ಕೇರ, ಕುಮಾರಿ ಸುಜಾತ, ಸದಾಶಿವ ಸಾಲ್ಯಾನ್, ನಾಗೇಶ್ ಸಾಲ್ಯಾನ್, ಪುಷ್ಪ ರವರನ್ನು ಆಯ್ಕೆ ಮಾಡಲಾಯಿತು
ಕಾರ್ಯಕ್ರಮವನ್ನು ಹಿಮಕರ್ ರವರು ನಿರೂಪಿಸಿದರು



