ಜನ ಮನದ ನಾಡಿ ಮಿಡಿತ

Advertisement

ಕಾರು ಹಾಗೂ ಬೈಕ್ ನಡುವೆ ಢಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ:ಬೈಕ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪ ರೆಖ್ಯ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಜೂ.5ರಂದು ರಾತ್ರಿ ನಡೆದಿದೆ.


ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ ನಳಾಲು ನಿವಾಸಿ ರವೀಂದ್ರ(48ವ.)ಎಂದು ಗುರುತಿಸಲಾಗಿದೆ. ಇವರು ಬೈಕ್‌ನಲ್ಲಿ ಎಂಜಿರದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಮನೆ ಕಡೆಗೆ ಬರುತ್ತಿದ್ದ ವೇಳೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ನಡುವೆ ಡಿಕ್ಕಿ ಸಂಭವಿಸಿ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ರವೀಂದ್ರ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.


ಮೇಲ್ಸೇತುವೆಯಲ್ಲೇ ಅಪಘಾತ:
ರೆಖ್ಯ ನೇಲ್ಯಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿಯ 1 ಬದಿ ಸರಕಾರಿ ಪ್ರೌಢಶಾಲೆ, ಇನ್ನೊಂದು ಬದಿ ಪ್ರಾಥಮಿಕ ಶಾಲೆಯಿದೆ. ರಸ್ತೆಯ ಎರಡು ಬದಿಯೂ ಅಂಗಡಿ, ಮನೆಗಳಿವೆ. ಈ ಹಿನ್ನೆಲೆಯಲ್ಲಿ ಇಲ್ಲಿ ಮೇಲ್ಸೇತುವೆ ರಚನೆಯಾಗಿದೆ. ಕಾಮಗಾರಿ ಸಂಪೂರ್ಣವಾಗಿಲ್ಲ. ಆದರೂ ಮೂರ್‍ನಾಲ್ಕು ವಾರಗಳ ಹಿಂದೆ ಮೇಲ್ಸೇತುವೆಯ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಸಮರ್ಪಕವಾದ ಸೂಚನಾ ಫಲಕಗಳು ಇಲ್ಲದೇ ಇರುವುದು ಮತ್ತು ಫೈಓವರ್‌ನ ಮಧ್ಯದಲ್ಲಿ ಇನ್ನೂ ಕಾಮಗಾರಿಗಳು ಅಲ್ಲಲ್ಲಿ ಬಾಕಿ ಇರುವುದರಿಂದ ಬೈಕ್‌ ಸವಾರರಿಗೆ ಸಂಚರಿಸಲು ಕಷ್ಟವಾಗುತ್ತಿದೆ. ಇದೀಗ ಈ ಮೇಲ್ಸೇತುವೆಯಲ್ಲೇ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಕೆಲದಿನಗಳ ಹಿಂದಷ್ಟೇ ಕಳಪೆ ಕಾಮಗಾರಿಯಿಂದಾಗಿ ಎಂಜಿರ ಸಮೀಪದ ಪರಕ್ಕಳದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಮುರಿದು ಬಿದ್ದಿತ್ತು.ಈ ಬಗ್ಗೆ ಸಾರ್ವಜನಿಕರು ಆಕೋಶ ವ್ಯಕ್ತಪಡಿಸಿದ್ದರು
ಮೃತರು ಪತ್ನಿ, ಇಬ್ಬರ ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!