ನೆಲ್ಯಾಡಿ:ಬೈಕ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪ ರೆಖ್ಯ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಜೂ.5ರಂದು ರಾತ್ರಿ ನಡೆದಿದೆ.
ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ ನಳಾಲು ನಿವಾಸಿ ರವೀಂದ್ರ(48ವ.)ಎಂದು ಗುರುತಿಸಲಾಗಿದೆ. ಇವರು ಬೈಕ್ನಲ್ಲಿ ಎಂಜಿರದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಮನೆ ಕಡೆಗೆ ಬರುತ್ತಿದ್ದ ವೇಳೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ನಡುವೆ ಡಿಕ್ಕಿ ಸಂಭವಿಸಿ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ರವೀಂದ್ರ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೇಲ್ಸೇತುವೆಯಲ್ಲೇ ಅಪಘಾತ:
ರೆಖ್ಯ ನೇಲ್ಯಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿಯ 1 ಬದಿ ಸರಕಾರಿ ಪ್ರೌಢಶಾಲೆ, ಇನ್ನೊಂದು ಬದಿ ಪ್ರಾಥಮಿಕ ಶಾಲೆಯಿದೆ. ರಸ್ತೆಯ ಎರಡು ಬದಿಯೂ ಅಂಗಡಿ, ಮನೆಗಳಿವೆ. ಈ ಹಿನ್ನೆಲೆಯಲ್ಲಿ ಇಲ್ಲಿ ಮೇಲ್ಸೇತುವೆ ರಚನೆಯಾಗಿದೆ. ಕಾಮಗಾರಿ ಸಂಪೂರ್ಣವಾಗಿಲ್ಲ. ಆದರೂ ಮೂರ್ನಾಲ್ಕು ವಾರಗಳ ಹಿಂದೆ ಮೇಲ್ಸೇತುವೆಯ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಸಮರ್ಪಕವಾದ ಸೂಚನಾ ಫಲಕಗಳು ಇಲ್ಲದೇ ಇರುವುದು ಮತ್ತು ಫೈಓವರ್ನ ಮಧ್ಯದಲ್ಲಿ ಇನ್ನೂ ಕಾಮಗಾರಿಗಳು ಅಲ್ಲಲ್ಲಿ ಬಾಕಿ ಇರುವುದರಿಂದ ಬೈಕ್ ಸವಾರರಿಗೆ ಸಂಚರಿಸಲು ಕಷ್ಟವಾಗುತ್ತಿದೆ. ಇದೀಗ ಈ ಮೇಲ್ಸೇತುವೆಯಲ್ಲೇ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಕೆಲದಿನಗಳ ಹಿಂದಷ್ಟೇ ಕಳಪೆ ಕಾಮಗಾರಿಯಿಂದಾಗಿ ಎಂಜಿರ ಸಮೀಪದ ಪರಕ್ಕಳದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಮುರಿದು ಬಿದ್ದಿತ್ತು.ಈ ಬಗ್ಗೆ ಸಾರ್ವಜನಿಕರು ಆಕೋಶ ವ್ಯಕ್ತಪಡಿಸಿದ್ದರು
ಮೃತರು ಪತ್ನಿ, ಇಬ್ಬರ ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…