ಬೆಳಗ್ಗೆ ಎದ್ದು ಮೊದಲು ಕುಡಿಯುವುದೇ ಚಹಾ. ಇದನ್ನು ಕುಡಿದ ಮೇಲೆ ಸಾಕಷ್ಟು ಜನರು ಮುಂದಿನ ಕೆಲಸ ಮಾಡಲು ಶುರು ಮಾಡ್ತಾರೆ. ಮನೆಯಲ್ಲಿ ಟೀ ಕುಡಿದಿಲ್ಲ ಎಂದರೂ ಬಿದಿ ಬದಿಯ ಅಂಗಡಿಗಳಲ್ಲಿ ಕುಡಿಯುವುದು ಅಭ್ಯಾಸ ಆಗಿ ಬಿಟ್ಟಿದೆ. ಈ ರೀತಿ ಹೊರಗೆ ಟೀ ಕುಡಿಯುವ ಮುನ್ನ ಕೊಂಚ ಜಾಗೃತಿ ವಹಿಸುವುದು ಉತ್ತಮ. ಏಕೆಂದರೆ ಚಹಾಗೆ ಹಾಕುವ ಪುಡಿಗಳಿಂದಲೂ ನಮ್ಮ ಜೀವಕ್ಕೆ ಆಪತ್ತು ಕಾದಿದೆ ಎನ್ನುವ ಮಾಹಿತಿ ಬಹಿರಂಗಗೊಂಡಿದೆ.
ಕಲರ್ ಕ್ಯಾಂಡಿ, ಗೋಬಿ ಬಳಿಕ ಬ್ರ್ಯಾಂಡ್ ಹೆಸರಲ್ಲಿ ಮಾರಾಟ ಮಾಡುವ ಟೀ ಪುಡಿಗಳಿಂದಲೂ ಅಪಾಯ ಕಾದಿದೆ. ರಸ್ತೆ ಬದಿಯ ಅಂಗಡಿಗಳಲ್ಲಿ ಕಡಿಮೆ ಬೆಲೆಯಲ್ಲಿ ಚಹಾ ಸಿಗುತ್ತದೆ ಎಂದು ಕುಡಿದರೆ ಪ್ರಾಣಕ್ಕೆ ಆಪತ್ತು ಇದೆ. ಟೀ ಪುಡಿ ಅಷ್ಟೇ ಅಲ್ಲ, ಸಾಂಬಾರ್ ಪುಡಿಗಳಿಂದಲೂ ಭಾರೀ ಅಪಾಯ ನಮಗೆಲ್ಲ ಕಾದಿದೆ. ಹೀಗಂತ ಹೇಳುತ್ತಿರುವುದು ನಾವಲ್ಲ. ಈ ಬಗ್ಗೆ ಖುದ್ದು ಆಹಾರ ಸಂರಕ್ಷಣಾಧಿಕಾರಿ ಶ್ರೀನಿವಾಸ್ ಅವರೇ ಹೇಳಿದ್ದಾರೆ.
ಟೀ ಪುಡಿಗಳ ಪ್ರತಿಷ್ಠಿತ ಕಂಪನಿಗಳಿಂದಲೇ ಸದ್ಯಕ್ಕೆ ಯಡವಟ್ಟು ಆಗುತ್ತಿದೆ. ಇದು ಒಂದೋ, ಎರಡೋ ಕಂಪನಿಗಳಿಂದ ಈ ರೀತಿ ಆಗುತ್ತಿಲ್ಲ. 10ಕ್ಕೂ ಹೆಚ್ಚು ಚಹಾ ಕಂಪನಿಗಳಿಂದ ಸಮಸ್ಯೆ ಆಗುತ್ತಿದೆ. ಯಾವುದೇ ಪ್ರಾಡಕ್ಟ್ ಬ್ರ್ಯಾಂಡ್ ಹೆಸರಲ್ಲಿ ರಿಜಿಸ್ಟರ್ ಆಗುವಾಗ ಯಾವ ಪ್ರಮಾಣದಲ್ಲಿ ಅದರಲ್ಲಿ ಸಾಮಾಗ್ರಿಗಳನ್ನು, ಕೆಮಿಕಲ್ಗಳನ್ನ, ಕಲರ್ಗಳನ್ನ ಹಾಕಲಾಗುತ್ತದೆ ನಮೂದು ಮಾಡಿಸುತ್ತಾರೆ. ಆದರೆ ಮಾಲೀಕರು ತನ್ನ ಬ್ರ್ಯಾಂಡ್ ಮೂಲವನ್ನು ಉಳಿಸಿಕೊಳ್ಳುವುದು ಕರ್ತವ್ಯ ಆಗಿರುತ್ತದೆ. ಇದರಲ್ಲಿ ಸ್ವಲ್ಪ ಹೆಚ್ಚು ಕಡಿಮೆ ಆದರೂ ಬ್ರ್ಯಾಂಡ್ನ ವಸ್ತು ಕಳಪೆ ಆಗಿ ಬಿಡುತ್ತದೆ. ಇಂತಹ ಬ್ರ್ಯಾಂಡ್ ವಸ್ತುಗಳನ್ನು ಬಳಸುವುದು ಅಪಾಯ ಆಗಿರುತ್ತೆ ಎಂದಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…