ಮಾನ್ಯ ಪೌರಾಯುಕ್ತರಾದ ಶ್ರೀ ಬದ್ರುದ್ದೀನ್ ಸೌದಾಗರ್ ಇವರು ಚುನಾವಣಾ ಸಂದರ್ಭ ಸರಕಾರದ ಆದೇಶದನ್ವಯ ಪುತ್ತೂರು ನಗರಸಭೆಗೆ ವರ್ಗಾವಣೆಗೊಂಡು ಬಂದಿದ್ದು, ಸದ್ರಿಯವರು ಅವರ ಮೂಲಸ್ಥಾನಕ್ಕೆ ತೆರಳುವ ಸಂದರ್ಭದಲ್ಲಿ ಪುತ್ತೂರು ನಗರಸಭಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಂದ ಬೀಳ್ಕೊಡುಗೆ ಸಮಾರಂಭವನ್ನು 07 ರಂದು ಏರ್ಪಡಿಸಲಾಯಿತು.
ಪುತ್ತೂರು ನಗರಸಭಾ ಸಭಾಂಗಣದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀ ದುರ್ಗಾಪ್ರಸಾದ್, ಪೌರಸೇವಾ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಕರುಣಾಕರ್ ವಿ, ಪದಾಧಿಕಾರಿಗಳು ಮತ್ತು ಸಹಾಯಕ ಅಭಿಯಂತರರಾದ ಶ್ರೀ ಕೃಷ್ಣಮೂರ್ತಿ ರೆಡ್ಡಿ, ನಗರಸಭಾ ಸದಸ್ಯರಾದ ಶ್ರೀ ಯೂಸುಫ್ ಹಾಗೂ ಇನ್ನಿತರ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು. ಸದ್ರಿ ಸಂದರ್ಭ ಮಾನ್ಯ ಪೌರಾಯುಕ್ತರಿಗೆ ಸನ್ಮಾನ ಮಾಡಲಾಯಿತು. ಸಿಬ್ಬಂದಿಗಳು ಪೌರಾಯುಕ್ತರ ಕುರಿತು ಮಾತನಾಡಿ ಸದ್ರಿಯವರ ಗುಣಗಾನ ಮಾಡಿ ಶುಭಹಾರೈಸಿದರು ಹಾಗೂ ಪೌರಾಯುಕ್ತರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸಂಘದ ಖಜಾಂಜಿ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ ಕೆ ವಂದನಾರ್ಪಣೆ ಮಾಡಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…