ಮಾನ್ಯ ಪೌರಾಯುಕ್ತರಾದ ಶ್ರೀ ಬದ್ರುದ್ದೀನ್ ಸೌದಾಗರ್ ಇವರು ಚುನಾವಣಾ ಸಂದರ್ಭ ಸರಕಾರದ ಆದೇಶದನ್ವಯ ಪುತ್ತೂರು ನಗರಸಭೆಗೆ ವರ್ಗಾವಣೆಗೊಂಡು ಬಂದಿದ್ದು, ಸದ್ರಿಯವರು ಅವರ ಮೂಲಸ್ಥಾನಕ್ಕೆ ತೆರಳುವ ಸಂದರ್ಭದಲ್ಲಿ ಪುತ್ತೂರು ನಗರಸಭಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಂದ ಬೀಳ್ಕೊಡುಗೆ ಸಮಾರಂಭವನ್ನು 07 ರಂದು ಏರ್ಪಡಿಸಲಾಯಿತು.
ಪುತ್ತೂರು ನಗರಸಭಾ ಸಭಾಂಗಣದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀ ದುರ್ಗಾಪ್ರಸಾದ್, ಪೌರಸೇವಾ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಕರುಣಾಕರ್ ವಿ, ಪದಾಧಿಕಾರಿಗಳು ಮತ್ತು ಸಹಾಯಕ ಅಭಿಯಂತರರಾದ ಶ್ರೀ ಕೃಷ್ಣಮೂರ್ತಿ ರೆಡ್ಡಿ, ನಗರಸಭಾ ಸದಸ್ಯರಾದ ಶ್ರೀ ಯೂಸುಫ್ ಹಾಗೂ ಇನ್ನಿತರ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು. ಸದ್ರಿ ಸಂದರ್ಭ ಮಾನ್ಯ ಪೌರಾಯುಕ್ತರಿಗೆ ಸನ್ಮಾನ ಮಾಡಲಾಯಿತು. ಸಿಬ್ಬಂದಿಗಳು ಪೌರಾಯುಕ್ತರ ಕುರಿತು ಮಾತನಾಡಿ ಸದ್ರಿಯವರ ಗುಣಗಾನ ಮಾಡಿ ಶುಭಹಾರೈಸಿದರು ಹಾಗೂ ಪೌರಾಯುಕ್ತರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸಂಘದ ಖಜಾಂಜಿ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ ಕೆ ವಂದನಾರ್ಪಣೆ ಮಾಡಿದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…