ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಕ್ಕೊಟ್ಟು,ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಇಂದು ಬೆಳಕಿಗೆ ಬಂದಿದೆ.
ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ.
ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬುಗುಡ್ಡೆಯ ರೀಟಾ ಡಿ ಸೋಜ ಎಂಬವರ ಮನೆಯಲ್ಲಿ ಬಾಡಿಗೆಗೆ ನೆಲೆಸಿದ್ದರು.
ರಾಮ್ ಶರಣ್ ಅವರ ಎರಡನೇ ಮಗಳಾದ ರಬೀನ ನೇಪಾಳದಲ್ಲಿ ಎಂಟನೇ ತರಗತಿ ಓದುತ್ತಿದ್ದು,ಆಕೆಯನ್ನು ಮಂಗಳೂರಿನಲ್ಲೆ ಓದಿಸುವ ಸಲುವಾಗಿ ತಿಂಗಳ ಹಿಂದೆ ಪೋಷಕರು ತೊಕ್ಕೊಟ್ಟಿಗೆ ಕರೆ ತಂದಿದ್ದರು.ಆದರೆ ರಬೀನ ತಾನು ನೇಪಾಳದಲ್ಲೇ ಓದು ಮುಂದುವರಿಸುವುದಾಗಿ ಹಠ ಹಿಡಿದಿದ್ದು ಈ ಬಗ್ಗೆ ಪೋಷಕರಲ್ಲಿ ಗಲಾಟೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ.
ಮದ್ಯಾಹ್ನ ರಬೀನಳ ತಾಯಿ ರಮೀಲ ಅವರು ಚಿಕ್ಕ ಮಕ್ಕಳನ್ನ ಶಾಲೆಯಿಂದ ಮನೆಗೆ ಕರಕೊಂಡು ಹೋಗಿದ್ದ ವೇಳೆ ರಬೀನ ಮನೆಯ ಶೌಚಾಲಯದ ಕಬ್ಬಿಣದ ಸಲಾಕೆಗೆ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಉಳ್ಳಾಲ ಠಾಣಾ ಪೊಲೀಸರು ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಮೃತ ರಬೀನ ತಂದೆ,ತಾಯಿ,ಇಬ್ಬರು ಸಹೋದರಿಯರು ,ಓರ್ವ ಸಹೋದರನನ್ನು ಅಗಲಿದ್ದಾರೆ
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…