ಬಂಟ್ವಾಳ: ಆಟೋ ಚಾಲಕರೋರ್ವರು ದಾರಿಯಲ್ಲಿ ಸಿಕ್ಕ ಹಣದ ಕಟ್ಟನ್ನು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದು, ಪ್ರಶಂಸೆಗೆ ಒಳಗಾಗಿದ್ದಾರೆ.
ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಬಸ್ತಿಕೋಡಿಯ ಆಟೋ ಮಾಲಕ ಸೀತಾರಾಮ ಶೆಟ್ಟಿ ಹರ್ಕಾಡಿ ಅವರು ಮಡಂತ್ಯಾರ್ ನಿಂದ ಆಟೊವನ್ನು ಬಾಡಿಗೆಗೆ ಬರುವಾಗ ರಸ್ತೆಯಲ್ಲಿ ಪ್ಲಾಸ್ಟಿಕ್ ಕವರೊಂದು ಸಿಕ್ಕಿದ್ದು ಅದರಲ್ಲಿ ಹದಿಮೂರುವರೆ ಸಾವಿರ ನಗದು ಒಂದು ಲಕ್ಷ ರೂ.ಗಿಂತ ಹೆಚ್ಚು ಮೊತ್ತದ ಚೆಕ್ ಹಾಗೂ ಕೆಲವು ಡಾಕ್ಯುಮೆಂಟಗಳು ದೊರೆತಿದ್ದವು.ಅದನ್ನು ಬಸ್ತಿಕೋಡಿಗೆ ತಂದು ಗ್ರಾಮ ಪಂಚಾಯತ್ ಸದಸ್ಯ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು ಅವರ ಮೂಲಕ ಅದರ ವಾರಸುದಾರರನ್ನು ಸಂಪರ್ಕಿಸಿ ಅವರನ್ನು ಬಸ್ತಿಕೋಡಿಗೆ ಕರೆಸಿ ಅವರಿಗೆ ಹಸ್ತಾಂತರಿಸಲಾಯಿತು. ಆಟೋ ಚಾಲಕ,ಮಾಲಕ ಸೀತಾರಾಮ ಶೆಟ್ಟಿ ಅವರ ಈ ಪ್ರಾಮಾಣಿಕತೆಗೆ ಬಸ್ತಿಕೋಡಿ ನಾಗರಿಕರು ಅವರನ್ನು ಅಭಿನಂದಿಸಿದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…