ಬಂಟ್ವಾಳ: ಆಟೋ ಚಾಲಕರೋರ್ವರು ದಾರಿಯಲ್ಲಿ ಸಿಕ್ಕ ಹಣದ ಕಟ್ಟನ್ನು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದು, ಪ್ರಶಂಸೆಗೆ ಒಳಗಾಗಿದ್ದಾರೆ.
ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಬಸ್ತಿಕೋಡಿಯ ಆಟೋ ಮಾಲಕ ಸೀತಾರಾಮ ಶೆಟ್ಟಿ ಹರ್ಕಾಡಿ ಅವರು ಮಡಂತ್ಯಾರ್ ನಿಂದ ಆಟೊವನ್ನು ಬಾಡಿಗೆಗೆ ಬರುವಾಗ ರಸ್ತೆಯಲ್ಲಿ ಪ್ಲಾಸ್ಟಿಕ್ ಕವರೊಂದು ಸಿಕ್ಕಿದ್ದು ಅದರಲ್ಲಿ ಹದಿಮೂರುವರೆ ಸಾವಿರ ನಗದು ಒಂದು ಲಕ್ಷ ರೂ.ಗಿಂತ ಹೆಚ್ಚು ಮೊತ್ತದ ಚೆಕ್ ಹಾಗೂ ಕೆಲವು ಡಾಕ್ಯುಮೆಂಟಗಳು ದೊರೆತಿದ್ದವು.ಅದನ್ನು ಬಸ್ತಿಕೋಡಿಗೆ ತಂದು ಗ್ರಾಮ ಪಂಚಾಯತ್ ಸದಸ್ಯ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು ಅವರ ಮೂಲಕ ಅದರ ವಾರಸುದಾರರನ್ನು ಸಂಪರ್ಕಿಸಿ ಅವರನ್ನು ಬಸ್ತಿಕೋಡಿಗೆ ಕರೆಸಿ ಅವರಿಗೆ ಹಸ್ತಾಂತರಿಸಲಾಯಿತು. ಆಟೋ ಚಾಲಕ,ಮಾಲಕ ಸೀತಾರಾಮ ಶೆಟ್ಟಿ ಅವರ ಈ ಪ್ರಾಮಾಣಿಕತೆಗೆ ಬಸ್ತಿಕೋಡಿ ನಾಗರಿಕರು ಅವರನ್ನು ಅಭಿನಂದಿಸಿದರು.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…