ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಸ್ ಗಾಗಿ ಕಾಯುತ್ತಿದ್ದ ವ್ಯಕ್ತಿಯೋರ್ವರು ಬಿದ್ದು ಸಾವು

ಬಂಟ್ವಾಳ: ಬಸ್ ಗಾಗಿ ಕಾಯುತ್ತಿದ್ದ ವ್ಯಕ್ತಿಯೋರ್ವರು ಬಿದ್ದು ಸಾವನ್ನಪ್ಪಿದ ಘಟನೆ ಇಂದು ಸಂಜೆ ಬಿಸಿರೋಡಿನಲ್ಲಿ ನಡೆದಿದೆ.


ದಾಸಕೋಡಿ ನಿವಾಸಿ ಅವಿವಾಹಿತ ಲೂಯಿಸ್ ಡಿ.ಸೋಜ ( 64) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಲೂಯಿಸ್ ಡಿ.ಸೋಜ ಅವರಿಗೆ ಕಾಲು ನೋವಿನ ಸಮಸ್ಯೆ ಇದ್ದು, ವೈದ್ಯರ ಬೇಟಿ ಮಾಡಿದರು ಔಷಧಿಗಾಗಿ ಬಿಸಿರೋಡಿಗೆ ಬಂದಿದ್ದರು.
ವೈದ್ಯರನ್ನು ಕಂಡು ವಾಪಸು ಮನೆಗೆ ತೆರಳುವುದಕ್ಕಾಗಿ ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣ ಬಳಿ ಹೋಟೆಲ್ ಮುಂಭಾಗದಲ್ಲಿ ನಿಂತುಕೊಂಡಿದ್ದರು.
ನಿಂತುಕೊಂಡಿದ್ದ ಇವರು ಒಮ್ಮೆಲೆ ಕೆಳಗೆ ಬಿದ್ದಿದ್ದು, ಇವರನ್ನು ಬಸ್ ಕಾಯುತ್ತಿದ್ದ ಪ್ರಯಾಣಿಕರು ಉಪಚರಿಸಿದ್ದಾರೆ.ಆದರೆ ಲೂಯಿಸ್ ಅದಾಗಲೇ ಮೂರ್ಚೆ ತಪ್ಪಿದ್ದರಿಂದ ಇವರನ್ನು ರಿಕ್ಷಾ ಚಾಲಕಮಾಲಕರ ಸಂಘದ ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್ ನೇತ್ರತ್ವದಲ್ಲಿ ರಿಕ್ಷಾ ಚಾಲಕರು ಸೇರಿ 102 ಅಂಬ್ಯುಲೆನ್ಸ್ ನ್ನು ಕರೆಸಿ ಅದರ ಮೂಲಕ ಬಂಟ್ವಾಳ ಆಸ್ಪತ್ರೆಗೆ ಸೇರಿಸಿದ್ದರು. ಇವರ ಬಳಿ ಇದ್ದ ಮೊಬೈಲ್ ನಂ.ಪಡೆದು ಕುಟುಂಬದ ಸದಸ್ಯರನ್ನು ವಿಶ್ವನಾಥ ಅವರು ಸಂಪರ್ಕ ಮಾಡಿ ವಿಷಯ ತಿಳಿಸಿದ್ದಾರೆ.
ಆದರೆ ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದಾಗ ಇವರು ಮೃತಪಟ್ಟ ಬಗ್ಗೆ ವರದಿ ನೀಡಿದ್ದಾರೆ.
ಬಿ.ಪಿ.ಕಡಿಮೆ ಆಗಿ ಬಿದ್ದು ಹೃದಯಾಘಾತದಿಂದ ಸಾವನ್ನಿಪ್ಪಿರಬೇಕು ಎಂದು ವೈದ್ಯರು ತಿಳಿಸಿದ್ದಾರೆ ಎಂದು ‌ಕುಟುಂಬ ಮೂಲಗಳು ಹೇಳಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!