ದಕ್ಷಿಣ ಕನ್ನಡ : ಕರಾಡ ಬ್ರಾಹ್ಮಣ ಸುಧಾರಕ ಸಂಘ ಗುಂಡ್ಯಡ್ಕ,ಮೂಡಬಿದಿರೆ ಹಾಗೂ ಆತ್ಮನಿರ್ಬರ ಟೂರ್ಸ್ ಮಾರ್ಗದರ್ಶನದಲ್ಲಿ ವೇದಮೂರ್ತಿ ಗಿರಿಧರ ಭಟ್ ಇವರ ಉಸ್ತುವಾರಿಯಲ್ಲಿ, ರಾಮಚಂದ್ರ ಪಂಡಿತ್ ಮತ್ತು ಸುನಿಲ್ ಗರ್ದೆ ಸಹಾಯದೊಂದಿಗೆ ಉತ್ತರ ಭಾರತ ಯಾತ್ರೆಯು ಎಂಟನೇ ದಿನ ಯಶಸ್ವಿಯಾಗಿ ಪೂರೈಸಿದ್ದು, ಯಾತ್ರೆಯ ಬಿಹಾರ ರಾಜ್ಯದ ಗಯಾವನ್ನು ತಲುಪಿತು.

ದಿನಾಂಕ 6.6.2024 ರಂದು ಮುಂಜಾನೆ ಮಂಗಳೂರಿನ ರೈಲು ಪ್ರಯಾಣದ ಮುಖಾಂತರ ಹೊರಟ ಸುಮಾರು 100 ಮಂದಿಯ ತಂಡ ದಿನಾಂಕ 8ರಂದು ಪ್ರಯಾಗರಾಜ ತಲುಪಿ ಅಲ್ಲಿ ವಿವಿಧ ತೀರ್ಥಕ್ಷೇತ್ರಗಳ ಸಂದರ್ಶನ ನಡೆಸಿ, ದಿನಾಂಕ 10 ರಂದು ಅಯೋಧ್ಯ ಶ್ರೀ ರಾಮನ ದರ್ಶನ ದರ್ಶನ ಪೂರೈಸಿ, ದಿನಾಂಕ 11 ರಂದು ಕಾಶಿ ತಲುಪಿದ್ದು, ಅಲ್ಲಿ ಗಂಗಾ ಆರತಿ ವೀಕ್ಷಣೆ ಕಾಶಿ ವಿಶ್ವನಾಥ ದರ್ಶನ ಮಾಡಿ ದಿನಾಂಕ 13 ರಂದು ಗಯಾ ತಲುಪಿದ್ದು, ತೀರ್ಥಕ್ಷೇತ್ರಗಳ ಸಂದರ್ಶನ ಮುಂದುವರೆದಿದೆ,
ದಿನಾಂಕ 17ರಂದು ಯಾತ್ರೆಯ ದೆಹಲಿ ತಲುಪಲಿದ್ದು, ಅಲ್ಲಿಂದ ರೈಲು ಮುಖಾಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದೆ ಇಂದು ಸಂಘಟಕರು ತಿಳಿಸಿದ್ದಾರೆ.







