ಇತರೆ

ಉಡುಪಿ: ಗಿನ್ನಿಸ್ ದಾಖಲೆ ಸೇರ್ಪಡೆಯಾಗುವ ಯತ್ನದಲ್ಲಿ ಮನೋಹರ್ ಆವಿಷ್ಕರಿಸಿದ ದೂರದರ್ಶಕ

ಉಡುಪಿ: ಮಣಿಪಾಲ ಎಂಐಟಿಯ ಉದ್ಯೋಗಿ, ಪರ್ಕಳದ ನಿವಾಸಿ ಸಂಶೋಧಕ ಆರ್.ಮನೋಹರ್ ತನ್ನದೇ ಸೂತ್ರ ಬಳಸಿ ಏಕಕಾಲಕ್ಕೆ ಎರಡು ಕಣ್ಣುಗಳಲ್ಲಿ ನೇರವಾಗಿ ನೋಡುವ ರೀತಿಯಲ್ಲಿ ಆವಿಷ್ಕರಿಸಿರುವ ದೂರದರ್ಶಕ ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗುವ ಪ್ರಯತ್ನದಲ್ಲಿದೆ. ದಾಖಲೆಗಾಗಿ ಮನೋಹರ್ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ.


ಇವರು ಈಗಾಗಲೇ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೇಟೆಂಟ್ ಪಡೆದು ಒಂದು ಕಣ್ಣಿನಲ್ಲಿ ನೇರವಾಗಿ ನೋಡುವ ದೂರದರ್ಶಕವನ್ನು ಆವಿಷ್ಕರಿಸುವ ಮೂಲಕ ಜಗತ್ತಿನ 9 ಮಂದಿಯಲ್ಲಿ ಒಬ್ಬರಾಗಿದ್ದಾರೆ. ಇದೀಗ ಮತ್ತೊಮ್ಮೆ ಆವಿಷ್ಕರಿಸಿ ಎರಡು ಕಣ್ಣಿನಲ್ಲಿ ಏಕಕಾಲಕ್ಕೆ ನೋಡುವಂತಹ ದೂರದರ್ಶಕವನ್ನು ಅವರು ಆವಿಷ್ಕರಿಸಿದ್ದಾರೆ. ಸದ್ಯದಲ್ಲಿ ಗಿನ್ನಿಸ್ ದಾಖಲೆ ತಂಡ ಪರ್ಕಳಕ್ಕೆ ಭೇಟಿ ನೀಡಲಿದೆ.
ಈ ದೂರದರ್ಶಕವು ಸುಮಾರು 80 ಎಕ್ಸ್ ದೂರದ ವಸ್ತು ಕಾಣುವ ತಂತ್ರಜ್ಞಾನ ಹೊಂದಿದ್ದು, ಈ ದೂರದರ್ಶಕದಲ್ಲಿ ಚಂದ್ರ ಮನಮೋಹಕನಾಗಿ ಕಾಣುತ್ತದೆ. ಈ ನವೀಕರಿಸಲ್ಪಟ್ಟ ದೂರದರ್ಶಕ ಎಚ್‌ಡಿ ಕ್ವಾಲಿಟಿಯನ್ನು ಹೊಂದಿದೆ. ಮಾರುಕಟ್ಟೆಯಲ್ಲಿ ಸಿಗುವಂತಹ ದೂರದರ್ಶಕದಲ್ಲಿ ಬಾಗಿ ಒಂದು ಕಣ್ಣಿನಲ್ಲಿ ನೋಡಬೇಕಾದರೆ, ಈ ಹೊಸ ಆವಿಷ್ಕಾರದ ದೂರದರ್ಶಕದಲ್ಲಿ ಆ ಕಷ್ಟ ಇರುವುದಿಲ್ಲ. ಇಲ್ಲಿ ಬಾಗಿ ನೋಡುವ ಬದಲು ನೇರವಾಗಿ ನಿಂತು ನೋಡ ಬಹುದಾಗಿದೆ. ಅದಕ್ಕಾಗಿ ಬೆಳಕಿನ ಪರಿವರ್ತನೆ ಮಾಡಿ ದೂರದರ್ಶಕವನ್ನು ನಿರ್ಮಿಸಿ ಪೇಟೆಂಟು ಪಡೆಯಲಾಗಿದೆ ಎಂದು ಮನೋಹರ್ ತಿಳಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…

38 mins ago

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…

55 mins ago

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

1 day ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

1 day ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

1 day ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

1 day ago