ಕರಾವಳಿ

ಕಿನ್ನಿಗೋಳಿ:ಹೋಟೆಲ್, ವಸತಿ ಸಂಕೀರ್ಣ ಗಳ ತ್ಯಾಜ್ಯ ನೀರು ವಿಲೇವಾರಿಗೆ ಶಾಶ್ವತ ಘನ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಒತ್ತಾಯ

ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬಹು ಮಹಡಿ ಕಟ್ಟಡ,ಮನೆ, ವಾಣಿಜ್ಯ ವಸತಿ ಸಮುಚ್ಚಯದ ತ್ಯಾಜ್ಯ ನೀರನ್ನು ದ್ರವ ತ್ಯಾಜ್ಯ ಘಟಕಕ್ಕೆ ಅನಧಿಕೃತವಾಗಿ ಬಿಡುತ್ತಿರುವುದರಿದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಿತ್ತುಲ್ ಪರಿಸರದಲ್ಲಿ ತ್ಯಾಜ್ಯ ನೀರು ಸರಿಯಾಗಿ ಹರಿದು ಹೋಗದೆ ಸ್ಥಳೀಯ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿದ್ದು ಶಾಶ್ವತ ವ್ಯವಸ್ಥೆ ಕಲ್ಪಿಸಲು ಶಾಸಕ ಉಮಾನಾಥ ಕೋಟ್ಯಾನ್ ನೇತೃತ್ವದಲ್ಲಿ ಕಿನಿಗೊಳಿ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ವಾಣಿಜ್ಯ ವಸತಿ ಸಮುಚ್ಚಯ,ಹೋಟೆಲ್ ಮಾಲೀಕರ, ಸಾರ್ವಜನಿಕರ ಸಭೆ ನಡೆಯಿತು.
ಸಭೆಯಲ್ಲಿ ಉದ್ಯಮಿ ಪ್ರಮೋದ್ ಕುಮಾರ್ ಮಾತನಾಡಿ ಹೋಟೆಲ್, ವಸತಿ ಸಂಕೀರ್ಣಗಳ ತ್ಯಾಜ್ಯ ನೀರು ಸರಿಯಾದ ರೀತಿಯಲ್ಲಿ ಹರಿದು ಹೋಗಲು ಶಾಶ್ವತ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿದರು.


ಸಾಮಾಜಿಕ ಕಾರ್ಯಕರ್ತ ಸ್ಟ್ಯಾನಿ ಪಿಂಟೋ ಮಾತನಾಡಿ ಹಿಂದಿನ ಕಿನ್ನಿಗೋಳಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರ್ಲಕ್ಷದಿಂದ ತ್ಯಾಜ್ಯ ಬಿಡುವ ಅವೈಜ್ಞಾನಿಕ ಕಾಮಗಾರಿ ನಡೆದಿದ್ದು ಈಗಲೂ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಇದೇ ಧೋರಣೆಯನ್ನು ಅನುಸರಿಸುತ್ತಿದ್ದಾರೆ, ಇಲ್ಲಿನ ಅಧಿಕಾರಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಇದರಿಂದ ಅಭಿವೃದ್ಧಿಗೆ ತೀವ್ರ ಹಿನ್ನಡೆಯಾಗಿದೆ , ಅಭಿವೃದ್ಧಿ ಬಗ್ಗೆ ಮಾತನಾಡಿದರೆ ನಮ್ಮ ಮೇಲೆ ಕೇಸ್ ಹಾಕುವ ಬೆದರಿಕೆ ಒಡ್ಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತ್ಯಾಜ್ಯ ನಿರ್ವಹಣೆ ಅವ್ಯವಸ್ಥೆಯಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಿತುಲ್ ಪರಿಸರದ ಜನ ಹೈರಾಣಾಗಿದ್ದಾರೆ ಇದಕ್ಕೆ ಪೂರ್ಣ ಪ್ರಮಾಣದ ಪರಿಹಾರ ಬೇಕು ಎಂದು ಒತ್ತಾಯಿಸಿದರು.


ಸ್ಥಳೀಯರಾದ ಐವಾನ್ ಮಾತನಾಡಿ ತ್ಯಾಜ್ಯ ನೀರು ಬಿಡುವ ಪ್ಲಾಂಟ್ ಶುರುವಾಗುವ ಮೊದಲೇ ನಾವು ಆಕ್ಷೇಪ ವ್ಯಕ್ತಪಡಿಸಿದ್ದೇವೆ. ಆದರೂ ಹಿಂದಿನ ಪಂಚಾಯತ್ ಆಡಳಿತ ಕ್ಯಾರೇ ಎನ್ನದೆ ಅರ್ಧಂಬರ್ಧ ಕಾಮಗಾರಿ ನಡೆಸಿ ಈಗ ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು ಮಾಜೀ ಜಿ.ಪಂ. ಉಪಾಧ್ಯಕ್ಷೆ ಶಾಲೆಟ್ ಪಿಂಟೋ ಮಾತನಾಡಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ ಚುನಾಯಿತ ಸದಸ್ಯರು ಇಲ್ಲದೆ ಆಡಳಿತಾಧಿಕಾರಿಗಳು ತಮ್ಮದೇ ಆಟ ಆಡುತ್ತಿದ್ದು ಅವ್ಯವಸ್ಥೆಗಳ ಬಗ್ಗೆ ಶಾಸಕರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ ಮಾತನಾಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ವಾಹನ ಪ್ರತೀ ಮನೆಗೆ ಹೋಗದಿದ್ದರೂ ಮನೆಯವರಿಂದ ತ್ಯಾಜ್ಯ ವಿಲೇವಾರಿ ಹಣ ವಸೂಲು ಮಾಡಲಾಗುತ್ತಿದೆ ಇದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು
ಶಾಸಕ ಉಮಾನಾಥ ಕೋಟ್ಯಾನ್ ನಾಗರಿಕರನ್ನು ಸಮಾಧಾನಪಡಿಸಿ ಮಾತನಾಡಿ ತ್ಯಾಜ್ಯ ನೀರಿನ ಘಟಕದಲ್ಲಿರುವ ಅನಧಿಕೃತ ಕನೆಕ್ಷನ್ ಕೂಡಲೇ ತೆಗೆಯಬೇಕು, ದ್ರವ ತ್ಯಾಜ್ಯ ಮಾತ್ರ ಬಿಡಬೇಕು, ನಾಗರಿಕರ ಹಾಗೂ ಹೋಟೆಲ್ ವಸತಿ ಸಮುಚ್ಚಯ ಮಾಲಕರ ಸಮಿತಿ ರಚನೆ ಮಾಡಿ ಘಟಕವನ್ನು ಶುದ್ಧೀಕರಣ ಗೊಳಿಸಬೇಕು ಮುಂದಿನ ದಿನಗಳಲ್ಲಿ ಪಟ್ಟಣ ಪಂಚಾಯತ್ ಮೂಲಕ ಜಾಗ ಗುರುತಿಸಿ 10 ಕೋಟಿ ವೆಚ್ಚದಲ್ಲಿ ನೂತನ ಘನತ್ಯಾಜ್ಯ ಘಟಕ ನಿರ್ಮಾಣ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಗರಾಜ್, ಜೂನಿಯರ್ ಇಂಜಿನಿಯರ್ ನಾಗರಾಜ್ ಎಚ್ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

24 hours ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

1 day ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

1 day ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

1 day ago

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…

1 day ago

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…

1 day ago