ಕರಾವಳಿ

ಪುತ್ತೂರು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಕಾವು ಹೇಮನಾಥ ಶೆಟ್ಟಿ ..

ಪುತ್ತೂರು: ತಾಲ್ಲೂಕು ಬಂಟರ ಸಂಘದ ನೂತನ‌ ಅಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಚುನಾವಣಾ ಅಧಿಕಾರಿಯಾಗಿ ಹಿರಿಯ ನ್ಯಾಯವಾದಿ ಅರಂತನಡ್ಕ ಬಾಲಕೃಷ್ಣ ರೈ ಇವರಿಂದ ಅಧಿಕೃತವಾಗಿ ಘೋಷಿಸಲು ಬಾಕಿ ಇದೆ. ನಾಮಪತ್ರ ಸಲ್ಲಿಕೆಗೆ ಜೂ. 15 ಕಡೆಯ ದಿನವಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಹೇಮನಾಥ ಶೆಟ್ಟಿ ಯವರು ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹೇಮನಾಥ ಶೆಟ್ಟಿ

1964 ರ ಡಿಸೆಂಬರ್ 21ರಂದು, ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಬನ್ನೂರು ಗುತ್ತು ಮನೆಯಲ್ಲಿ ಕಾವು ಅಂತಪ್ಪ ಶೆಟ್ಟಿ ಮತ್ತು ಬನ್ನೂರು ಗುತ್ತು ತಾರಾ ಅಂತಪ್ಪ ಶೆಟ್ಟಿ ದಂಪತಿಗಳ ತೃತೀಯ ಪುತ್ರನಾಗಿ ಜನಿಸಿದರು. ತನ್ನ ಪ್ರಾಥಮಿಕ ಶಿಕ್ಷಣವನ್ನು ಮಡಿಕೇರಿ ಸೈಂಟ್ ಮೈಕೆಲ್ ಶಾಲೆಯಲ್ಲಿ ಪ್ರಾರಂಭಿಸಿ ನಂತರ ಮಾಡ್ನೂರು ಕಾವು ಪ್ರಾಥಮಿಕ ಶಾಲೆಯಲ್ಲಿ ಹಾಗೂ ಪೆರ್ನಾಜೆ ಸೀತಾರಾಘವ ಪ್ರೌಢಶಾಲೆ ಮತ್ತು , ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಪಡೆದು, ಸುಳ್ಯ ಕೆ ವಿ ಜಿ ಶಿಕ್ಷಣ ಸಂಸ್ಥೆಯಲ್ಲಿ ಪದವಿಪೂರ್ವ ಶಿಕ್ಷಣವನ್ನು ಅಭ್ಯಸಿಸಿದರು. ಪುತ್ತೂರು ಸಂತಫಿಲೋಮಿನಾ ಕಾಲೇಜಿನಲ್ಲಿ ಬಿ ಎ ಪದವಿ ಶಿಕ್ಷಣವನ್ನು ಪಡೆದರು.ಎನ್ ಎಸ್ ಯು ಐ ಪುತ್ತೂರು ತಾಲೂಕು ಅಧ್ಯಕ್ಷರಾಗಿ, ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ, 9 ವರ್ಷಗಳ ಕಾಲ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕರಾಗಿ, ರಾಜಕೀಯವಾಗಿ ಜಿಲ್ಲೆ,ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ.ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯದರ್ಶಿಯಾಗಿ ಆರು ವರ್ಷ ಸೇವೆ ಮಾಡಿದ ಇವರು ಇದೀಗ 2 ನೇ ಅವಧಿಗೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸುಮಾರು 10 ವರುಷಗಳಿಂದ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾಗಿದ್ದಾರೆ.ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಸಮಿತಿ ಸದಸ್ಯರಾಗಿದ್ದಾರೆ. ಹೇಮನಾಥ ಶೆಟ್ಟಿಯವರ ಪತ್ನಿ ಮುಂಡಾಳ ಗುತ್ತು ಅನಿತಾ ಹೇಮನಾಥ ಶೆಟ್ಟಿ ಯವರು ವೃತ್ತಿಯಲ್ಲಿ ನ್ಯಾಯವಾದಿಯಾಗಿ, ಎರಡು ಬಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ , ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರಾಗಿದ್ದರು.ಇವರಿಗೆ ಎರಡು ಪುತ್ರಿಯರು ಹಿರಿಯ ಮಗಳು ಡಾ ವಾಸ್ತವಿ ಶೆಟ್ಟಿ MBBS ಮುಗಿಸಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿ ನಂತರ ಪುತ್ತೂರಿನಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಕ್ಲೀನಿಕ್ ನಲ್ಲಿ ಸೇವೆ ಸಲ್ಲಿಸಿ ಈಗ ಉನ್ನತ ವಿದ್ಯಾಭ್ಯಾಸವನ್ನು ಮಾಡಲು ಪೂರ್ವ ತಯಾರಿ ಮಾಡುತ್ತಿದ್ದಾರೆ. ಎರಡನೇ ಮಗಳು ರಂಜಿತಾ ಶೆಟ್ಟಿ ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…

37 mins ago

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್‌ಆರ್‌ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…

39 mins ago

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…

4 hours ago

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…

4 hours ago

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

 ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…

1 day ago

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…

1 day ago