ಮುಲ್ಕಿ:ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿ ಬಳಿಯ ಎಸ್ ಕೋಡಿ ಎಂಬಲ್ಲಿ ಸುಮಾರು 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂತರ್ಜಲ ರಕ್ಷಣೆಯ ಕೆರೆ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕ ಹಾಗೂ ನಿಧಾನ ಗತಿಯಿಂದ ನಡೆಯುತ್ತಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ
ಕಳೆದ ವರ್ಷಗಳ ಹಿಂದೆ ಶಾಸಕ ಉಮಾನಾಥ ಕೋಟ್ಯಾನ್ ರವರು ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಕೆರೆಯನ್ನು ಅಂತರ್ಜಲ ಅಭಿವೃದ್ಧಿ ನಿಟ್ಟಿನಲ್ಲಿ ಶಿಲಾನ್ಯಾಸ ಮೂಲಕ ಕಾಮಗಾರಿಗೆ ಚಾಲನೆ ನೀಡಿದ್ದರು.
ಆದರೆ ಬರೋಬ್ಬರಿ ವರ್ಷದ ಬಳಿಕ ಕಳೆದ ತಿಂಗಳ ಹಿಂದೆ ಮಳೆಗಾಲದಲ್ಲಿ ಏಕಾಏಕಿ ಕಾಮಗಾರಿ ಆರಂಭಗೊಂಡಿದ್ದು ಮೊದಲ ಮಳೆಗೆ ಕೆರೆ ಮೇಲ್ಭಾಗದ ಮಣ್ಣು ಕೊಚ್ಚಿ ಹೋಗಿದೆ ಕೆರೆಯ ಒಳಬಾಗದಲ್ಲಿ ತಡೆಗೋಡೆ ನಿರ್ಮಿಸದ ಕಾರಣ ಮೇಲ್ಬಾಗದಲ್ಲಿ ಹಾಕಿದ ಮಣ್ಣುಮತ್ತೆ ಕೆರೆ ಪಾಲಾಗಿದೆ
ಅವೈಜ್ಞಾನಿಕ ಕಾಮಗಾರಿಯಿಂದ ಮಳೆಗಾಲದಲ್ಲಿ ಸುರಿಯುವ ಮಳೆಗೆ ಪುನಃ ಮಣ್ಣು ಕೊಚ್ಚಿ ಹೋಗುವ ಭೀತಿ ಎದುರಾಗಿದ್ದು ಜೊತೆಗೆ ಸಮೀಪದಲ್ಲಿ ರಾಜ್ಯ ಹೆದ್ದಾರಿ ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಯ 101 ಮನೆಗಳ ಸಂಪರ್ಕ ರಸ್ತೆಗೆ ಸಂಚಕಾರ ಉಂಟಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ
ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ಟ್ಯಾನಿ ಪಿಂಟೋ ಮಾತನಾಡಿ ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿಯಿಂದ ಜನರ ತೆರಿಗೆ ಹಣ ಪೋಲಾಗುವ ಸಾಧ್ಯತೆಯಿದ್ದು ಈ ಬಗ್ಗೆ ಶಾಸಕರು ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಧಿಕಾರಿಗಳು ಎಚ್ಚೆತ್ತು ಕಾಮಗಾರಿ ಬಗ್ಗೆ ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪಟ್ಟಣ ಪಂಚಾಯತಿ ಜೂನಿಯರ್ ಇಂಜಿನಿಯರ್ ನಾಗರಾಜ್ ಮಾತನಾಡಿ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಸ್ಥಳೀಯರ ದೂರಿನಿಂದ ಗಮನಕ್ಕೆ ಬಂದಿದ್ದು
20 ಲಕ್ಷದ ಕಾಮಗಾರಿಯಲ್ಲಿ ಇದುವರೆಗೂ ಗುತ್ತಿಗೆದಾರರಿಗೆ ಹಣ ಸಂದಾಯವಾಗಿಲ್ಲ ಸಮರ್ಪಕ ಕಾಮಗಾರಿ ನಡೆದ ಮೇಲೆ ಅಧಿಕಾರಿಗಳಿಂದ ಪರಿಶೀಲಿಸಿ ಬಿಲ್ ಮಾಡಲಾಗುವುದು ಎಂದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…