ಹೈದರಬಾದ್ : ಮೃತಪಟ್ಟ ಮೇಲೆ ದೇಹವನ್ನು ವ್ಯರ್ಥವಾಗಿ ಮಣ್ಣು ಮಾಡುವುದಕ್ಕಿಂತ ಅಂಗಾಂಗ ದಾನ ಮಾಡಿದರೆ ಇನ್ನೊಂದು ಜೀವವಾದರೂ ಬದುಕುಳಿಯುವಂತೆ ಮಾಡಬಹುದು. ಅಂಥದ್ದೇ ದಿಟ್ಟ ನಿರ್ಧಾರ ಕೈಗೊಂಡಿದೆ 14 ತಿಂಗಳ ಪುಟ್ಟ ಕೂಸಿನ ಕುಟುಂಬ. ಮೆದುಳು ನಿಷ್ಕ್ರಿಯಗೊಂಡಿದ್ದ ಮಗುವಿನ ಮೂತ್ರಪಿಂಡವನ್ನು 58 ವರ್ಷದ ಮಹಿಳೆಗೆ ದಾನ ಮಾಡಲಾಗಿದೆ. ಹೈದರಾಬಾದ್ನ ಕಿಮ್ಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಕಸಿ ಮಾಡಿದ್ದಾರೆ.ಕಳೆದ 7 ವರ್ಷಗಳಿಂದ ಮಹಿಳೆ ಮೂತ್ರಪಿಂಡ ಸಮಸ್ಯೆಯಿಂದಾಗಿ ಡಯಾಲಿಸಿಸ್ಗೆ ಒಳಗಾಗಿದ್ದರು. ಇದೇ ವೇಳೆ 14 ತಿಂಗಳ ಕೂಸಿನ ಮೆದುಳು ನಿಷ್ಕ್ರಿಯಗೊಂಡಿತ್ತು. ವೈದ್ಯರು ಮಗು ಬದುಕಲು ಸಾಧ್ಯವಿಲ್ಲ ಎಂದು ತಿಳಿಸಿದಾಗ, ಅಂಗಾಂಗ ದಾನಕ್ಕೆ ಮುಂದಾದರು. ಅದರಂತೆ ಮೂತ್ರಪಿಂಡವನ್ನು ಅಗತ್ಯವಿರುವ ಮಹಿಳೆಗೆ ದಾನ ಮಾಡಲು ನಿರ್ಧರಿಸಿದ್ದಾರೆ. ಸಿಕಂದರಾಬಾದ್ನ ಕಿಮ್ಸ್ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆಯನ್ನು ಅಲ್ಲಿನ ವೈದ್ಯರು ನಡೆಸಿದ್ದಾರೆ. ಚಿಕ್ಕ ಮಕ್ಕಳ ಅಂಗಗಳು ತುಲನಾತ್ಮಕವಾಗಿ ಚಿಕ್ಕದಾಗಿರುವುದರಿಂದ ವಯಸ್ಸಾದ ಜನರಲ್ಲಿ ಅಳವಡಿಸುವಲ್ಲಿ ಹಲವು ತೊಡಕುಗಳು ಉಂಟಾಗುತ್ತವೆ. ಇದೆಲ್ಲವನ್ನೂ ಮೀರಿ ನುರಿತ ವೈದ್ಯರು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಉಪಕರಣಗಳ ನೆರವಿನಿಂದ ಈ ಸಾಧನೆ ಮಾಡಿದ್ದಾರೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…