ಹೈದರಬಾದ್ : ಮೃತಪಟ್ಟ ಮೇಲೆ ದೇಹವನ್ನು ವ್ಯರ್ಥವಾಗಿ ಮಣ್ಣು ಮಾಡುವುದಕ್ಕಿಂತ ಅಂಗಾಂಗ ದಾನ ಮಾಡಿದರೆ ಇನ್ನೊಂದು ಜೀವವಾದರೂ ಬದುಕುಳಿಯುವಂತೆ ಮಾಡಬಹುದು. ಅಂಥದ್ದೇ ದಿಟ್ಟ ನಿರ್ಧಾರ ಕೈಗೊಂಡಿದೆ 14 ತಿಂಗಳ ಪುಟ್ಟ ಕೂಸಿನ ಕುಟುಂಬ. ಮೆದುಳು ನಿಷ್ಕ್ರಿಯಗೊಂಡಿದ್ದ ಮಗುವಿನ ಮೂತ್ರಪಿಂಡವನ್ನು 58 ವರ್ಷದ ಮಹಿಳೆಗೆ ದಾನ ಮಾಡಲಾಗಿದೆ. ಹೈದರಾಬಾದ್ನ ಕಿಮ್ಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಕಸಿ ಮಾಡಿದ್ದಾರೆ.ಕಳೆದ 7 ವರ್ಷಗಳಿಂದ ಮಹಿಳೆ ಮೂತ್ರಪಿಂಡ ಸಮಸ್ಯೆಯಿಂದಾಗಿ ಡಯಾಲಿಸಿಸ್ಗೆ ಒಳಗಾಗಿದ್ದರು. ಇದೇ ವೇಳೆ 14 ತಿಂಗಳ ಕೂಸಿನ ಮೆದುಳು ನಿಷ್ಕ್ರಿಯಗೊಂಡಿತ್ತು. ವೈದ್ಯರು ಮಗು ಬದುಕಲು ಸಾಧ್ಯವಿಲ್ಲ ಎಂದು ತಿಳಿಸಿದಾಗ, ಅಂಗಾಂಗ ದಾನಕ್ಕೆ ಮುಂದಾದರು. ಅದರಂತೆ ಮೂತ್ರಪಿಂಡವನ್ನು ಅಗತ್ಯವಿರುವ ಮಹಿಳೆಗೆ ದಾನ ಮಾಡಲು ನಿರ್ಧರಿಸಿದ್ದಾರೆ. ಸಿಕಂದರಾಬಾದ್ನ ಕಿಮ್ಸ್ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆಯನ್ನು ಅಲ್ಲಿನ ವೈದ್ಯರು ನಡೆಸಿದ್ದಾರೆ. ಚಿಕ್ಕ ಮಕ್ಕಳ ಅಂಗಗಳು ತುಲನಾತ್ಮಕವಾಗಿ ಚಿಕ್ಕದಾಗಿರುವುದರಿಂದ ವಯಸ್ಸಾದ ಜನರಲ್ಲಿ ಅಳವಡಿಸುವಲ್ಲಿ ಹಲವು ತೊಡಕುಗಳು ಉಂಟಾಗುತ್ತವೆ. ಇದೆಲ್ಲವನ್ನೂ ಮೀರಿ ನುರಿತ ವೈದ್ಯರು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಉಪಕರಣಗಳ ನೆರವಿನಿಂದ ಈ ಸಾಧನೆ ಮಾಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…