ಜನ ಮನದ ನಾಡಿ ಮಿಡಿತ

Advertisement

ಬೀಜಾಡಿ: ಕಡಲಿನಬ್ಬರಿಗೆ ಸಿಕ್ಕಿ ಕೊಚ್ಚಿ ಹೋದ ಯುವಕ; ಇನ್ನೋರ್ವನ ರಕ್ಷಣೆ

ಉಡುಪಿ: ಸಮುದ್ರ ವಿಹಾರಕ್ಕೆ ತೆರಳಿದ ಇಬ್ಬರು ಯುವಕರ ಪೈಕಿ ಓರ್ವ ಅಲೆಗಳ ರಭಸಕ್ಕೆ ಸಿಕ್ಕಿ ಕೊಚ್ಚಿಹೋದ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಎಂಬಲ್ಲಿ ನಡೆದಿದೆ.

ತಿಪಟೂರು ಮೂಲದ ಯೋಗೀಶ್ (23) ನೀರು ಪಾಲಾದ ಯುವಕ. ಇನ್ನೋರ್ವನನ್ನು ರಕ್ಷಣೆ ಮಾಡಲಾಗಿದೆ. ಕಡಲ ತೀರಕ್ಕೆ ತೆರಳಿದ ಇಬ್ಬರು ತಿಪಟೂರು ಮೂಲದವರಾಗಿದ್ದು, ಗುರುವಾರ ‌ನಡೆಯಲಿದ್ದ ವಿವಾಹ ಕಾರ್ಯಕ್ರಮಕ್ಕೆ ಸ್ಮೇಹಿತನ ಆಮಂತ್ರಣದ ಮೇಲೆ ಬೀಜಾಡಿಗೆ ಆಗಮಿಸಿದ್ದರು. ನಿನ್ನೆ ಸಂಜೆ ವೇಳೆ ಸಮುದ್ರದ ಬಳಿ ತೆರಳಿದ್ದು, ನೀರಿಗಿಳಿದ ಯೋಗೀಶ್ ಅಲೆಗಳ ಅಬ್ಬರಕ್ಕೆ ಸಿಲುಕಿ ನೀರುಪಾಲಾಗಿದ್ದಾರೆ. ಆತನ ಸ್ನೇಹಿತನನ್ನು ಸ್ಥಳೀಯರು ಬಚಾವ್ ಮಾಡಿದ್ದಾರೆ. ಕಾಣೆಯಾದ ಯುವಕನ ಹುಡುಕಾಟಕ್ಕೆ ಪೊಲೀಸರು, ಮೀನುಗಾರರು, ಸ್ಥಳೀಯರು ಹರಸಾಹಸಪಟ್ಟರು. ಕುಂದಾಪುರ ಪೊಲೀಸ್ ಠಾಣಾ ನಿರೀಕ್ಷಕ ಯು.ಬಿ ನಂದಕುಮಾರ್, ಪಿಎಸ್ಐ ಪ್ರಸಾದ್ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!