ಉಡುಪಿ: ಸಮುದ್ರ ವಿಹಾರಕ್ಕೆ ತೆರಳಿದ ಇಬ್ಬರು ಯುವಕರ ಪೈಕಿ ಓರ್ವ ಅಲೆಗಳ ರಭಸಕ್ಕೆ ಸಿಕ್ಕಿ ಕೊಚ್ಚಿಹೋದ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಎಂಬಲ್ಲಿ ನಡೆದಿದೆ.
ತಿಪಟೂರು ಮೂಲದ ಯೋಗೀಶ್ (23) ನೀರು ಪಾಲಾದ ಯುವಕ. ಇನ್ನೋರ್ವನನ್ನು ರಕ್ಷಣೆ ಮಾಡಲಾಗಿದೆ. ಕಡಲ ತೀರಕ್ಕೆ ತೆರಳಿದ ಇಬ್ಬರು ತಿಪಟೂರು ಮೂಲದವರಾಗಿದ್ದು, ಗುರುವಾರ ನಡೆಯಲಿದ್ದ ವಿವಾಹ ಕಾರ್ಯಕ್ರಮಕ್ಕೆ ಸ್ಮೇಹಿತನ ಆಮಂತ್ರಣದ ಮೇಲೆ ಬೀಜಾಡಿಗೆ ಆಗಮಿಸಿದ್ದರು. ನಿನ್ನೆ ಸಂಜೆ ವೇಳೆ ಸಮುದ್ರದ ಬಳಿ ತೆರಳಿದ್ದು, ನೀರಿಗಿಳಿದ ಯೋಗೀಶ್ ಅಲೆಗಳ ಅಬ್ಬರಕ್ಕೆ ಸಿಲುಕಿ ನೀರುಪಾಲಾಗಿದ್ದಾರೆ. ಆತನ ಸ್ನೇಹಿತನನ್ನು ಸ್ಥಳೀಯರು ಬಚಾವ್ ಮಾಡಿದ್ದಾರೆ. ಕಾಣೆಯಾದ ಯುವಕನ ಹುಡುಕಾಟಕ್ಕೆ ಪೊಲೀಸರು, ಮೀನುಗಾರರು, ಸ್ಥಳೀಯರು ಹರಸಾಹಸಪಟ್ಟರು. ಕುಂದಾಪುರ ಪೊಲೀಸ್ ಠಾಣಾ ನಿರೀಕ್ಷಕ ಯು.ಬಿ ನಂದಕುಮಾರ್, ಪಿಎಸ್ಐ ಪ್ರಸಾದ್ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…