ಉಡುಪಿ: ಸಮುದ್ರ ವಿಹಾರಕ್ಕೆ ತೆರಳಿದ ಇಬ್ಬರು ಯುವಕರ ಪೈಕಿ ಓರ್ವ ಅಲೆಗಳ ರಭಸಕ್ಕೆ ಸಿಕ್ಕಿ ಕೊಚ್ಚಿಹೋದ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಎಂಬಲ್ಲಿ ನಡೆದಿದೆ.
ತಿಪಟೂರು ಮೂಲದ ಯೋಗೀಶ್ (23) ನೀರು ಪಾಲಾದ ಯುವಕ. ಇನ್ನೋರ್ವನನ್ನು ರಕ್ಷಣೆ ಮಾಡಲಾಗಿದೆ. ಕಡಲ ತೀರಕ್ಕೆ ತೆರಳಿದ ಇಬ್ಬರು ತಿಪಟೂರು ಮೂಲದವರಾಗಿದ್ದು, ಗುರುವಾರ ನಡೆಯಲಿದ್ದ ವಿವಾಹ ಕಾರ್ಯಕ್ರಮಕ್ಕೆ ಸ್ಮೇಹಿತನ ಆಮಂತ್ರಣದ ಮೇಲೆ ಬೀಜಾಡಿಗೆ ಆಗಮಿಸಿದ್ದರು. ನಿನ್ನೆ ಸಂಜೆ ವೇಳೆ ಸಮುದ್ರದ ಬಳಿ ತೆರಳಿದ್ದು, ನೀರಿಗಿಳಿದ ಯೋಗೀಶ್ ಅಲೆಗಳ ಅಬ್ಬರಕ್ಕೆ ಸಿಲುಕಿ ನೀರುಪಾಲಾಗಿದ್ದಾರೆ. ಆತನ ಸ್ನೇಹಿತನನ್ನು ಸ್ಥಳೀಯರು ಬಚಾವ್ ಮಾಡಿದ್ದಾರೆ. ಕಾಣೆಯಾದ ಯುವಕನ ಹುಡುಕಾಟಕ್ಕೆ ಪೊಲೀಸರು, ಮೀನುಗಾರರು, ಸ್ಥಳೀಯರು ಹರಸಾಹಸಪಟ್ಟರು. ಕುಂದಾಪುರ ಪೊಲೀಸ್ ಠಾಣಾ ನಿರೀಕ್ಷಕ ಯು.ಬಿ ನಂದಕುಮಾರ್, ಪಿಎಸ್ಐ ಪ್ರಸಾದ್ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…