ಉಡುಪಿ: ಜನ್ಸಾಲೆಯ 13 ವರ್ಷದ ಚಿಕ್ಕ ಬಾಲಕನ ಹಲ್ಲೆ ನಡೆಸಿದ ಆರೋಪಿಯನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿ ವಿಶ್ವಕರ್ಮ ಸಮಾಜ ಸೇವಾ ಸಂಘಟನೆಯ ನೇತೃತ್ವದಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.
ಜನ್ಸಾಲೆ ಹೆಗ್ಗೇರಿಯ ಶಾಂತಾರಾಮ ಶೆಟ್ಟಿ ನಾರುಮಕ್ಕಿ ಎಂಬಾತ ಪ್ರಥ್ವಿ ಎನ್ನುವ ಬಾಲಕ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದ, ಈ ಕುರಿತು ಬಾಲಕನ ಪೋಷಕರು ಈ ಹಿಂದೆ ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಾಗಿ ವಾರ ಕಳೆದರು ಇದುವರೆಗೂ ಯಾವುದೇ ಪೊಲೀಸ್ ತನಿಖೆ ನಡೆಸದ ಹಿನ್ನಲೆಯಲ್ಲಿ ಇಂದು ಸಂಘಟನೆಯ ವತಿಯಿಂದ, ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ದೂರು ನೀಡಲಾಯಿತು. ಈ ಕುರಿತು ಠಾಣಾ ಸಬ್ ಇನ್ಸ್ಪೆಕ್ಟರ್ ನಾಸೀರ್ ಹುಸೇನ್ ಮಾತನಾಡಿ, ಆರೋಪಿಯ ಪತ್ತೆಗೆ ಶ್ರಮಿಸುತ್ತಿದ್ದು ಆತ ಮೊಬೈಲ್ ನ್ನು ಮನೆಯಲ್ಲೇ ಇಟ್ಟು ತಪ್ಪಿಸಿಕೊಂಡಿದ್ದಾನೆ. ಪತ್ತೆಗೆ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…