ಉಡುಪಿ: ಜನ್ಸಾಲೆಯ 13 ವರ್ಷದ ಚಿಕ್ಕ ಬಾಲಕನ ಹಲ್ಲೆ ನಡೆಸಿದ ಆರೋಪಿಯನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿ ವಿಶ್ವಕರ್ಮ ಸಮಾಜ ಸೇವಾ ಸಂಘಟನೆಯ ನೇತೃತ್ವದಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.
ಜನ್ಸಾಲೆ ಹೆಗ್ಗೇರಿಯ ಶಾಂತಾರಾಮ ಶೆಟ್ಟಿ ನಾರುಮಕ್ಕಿ ಎಂಬಾತ ಪ್ರಥ್ವಿ ಎನ್ನುವ ಬಾಲಕ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದ, ಈ ಕುರಿತು ಬಾಲಕನ ಪೋಷಕರು ಈ ಹಿಂದೆ ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಾಗಿ ವಾರ ಕಳೆದರು ಇದುವರೆಗೂ ಯಾವುದೇ ಪೊಲೀಸ್ ತನಿಖೆ ನಡೆಸದ ಹಿನ್ನಲೆಯಲ್ಲಿ ಇಂದು ಸಂಘಟನೆಯ ವತಿಯಿಂದ, ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ದೂರು ನೀಡಲಾಯಿತು. ಈ ಕುರಿತು ಠಾಣಾ ಸಬ್ ಇನ್ಸ್ಪೆಕ್ಟರ್ ನಾಸೀರ್ ಹುಸೇನ್ ಮಾತನಾಡಿ, ಆರೋಪಿಯ ಪತ್ತೆಗೆ ಶ್ರಮಿಸುತ್ತಿದ್ದು ಆತ ಮೊಬೈಲ್ ನ್ನು ಮನೆಯಲ್ಲೇ ಇಟ್ಟು ತಪ್ಪಿಸಿಕೊಂಡಿದ್ದಾನೆ. ಪತ್ತೆಗೆ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…