ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ ಯುವವಾಹಿನಿ ಅರಿವು, ಸಮ್ಮಾನ, ಯುವಸಿರಿ ಪುರಸ್ಕಾರ ಪ್ರದಾನ

ಮೂಡುಬಿದಿರೆ: ನಾವು ಗುರುಗಳ ಹಿಂಬಾಲಕರಾಗಿ ಬದುಕಿದರೆ ಸಾಲದು ಬದಲಾಗಿ ಅವರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಎಷ್ಟರ ಮಟ್ಟಿಗೆ ಅಳವಡಿಸಿಕೊಂಡಿದ್ದೇವೆ ಎಂಬುದು ಮುಖ್ಯ ಎಂದು ರಾಜ್ಯ ಹೈಕೋರ್ಟ್ ನಿರ್ದೇಶಿತ ಹಿರಿಯ ನ್ಯಾಯವಾದಿ ಇರುವೈಲು ತಾರಾನಾಥ ಪೂಜಾರಿ ಅವರು ಪ್ರಶ್ನಿಸಿದ್ದಾರೆ.

ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಮೂಡುಬಿದಿರೆ ಘಟಕದ ವತಿಯಿಂದ ಭಾನುವಾರ ಶ್ರೀ ನಾರಾಯಣ ಗುರುಗಳ ಜೀವನ-ಸಂದೇಶ ಗೋ ಅರಿವು -2024, ಸಮ್ಮಾನ, ಯುವಸಿರಿ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ವಿದ್ಯೆಯ ಮೇಲೆ ಹಿಡಿತ ಸಾಧಿಸಲು ಎಷ್ಟು ಬುದ್ಧಿವಂತರಾದರೂ ಪ್ರಯೋಜನವಿಲ್ಲ. ಅದಕ್ಕಿಂತಲೂ ಮುಖ್ಯವಾಗಿ ಪರಿಶ್ರಮ, ಶಿಸ್ತು ಮತ್ತು ಪ್ರಯತ್ನ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ತಾನು ಇಂತಹ ವೇದಿಕೆಯಿಂದ ಪ್ರೋತ್ಸಾಹವನ್ನು ಪಡೆದಿದ್ದೇನೆ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸಿಕ್ಕಿದರೆ ಮಾತ್ರ ಅವರು ಯಶಸ್ಸನ್ನು ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಯುವವಾಹಿನಿಯು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು.
ಯುವವಾಹಿನಿ ಅಧ್ಯಕ್ಷ ಶಂಕರ ಎ. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು
ಭಾನುಮತಿ ಶೀನಪ್ಪ ಅವರು ಕಾರ್ಯ ಕ್ರಮ ಉದ್ಘಾಟಿಸಿ ಶುಭಹಾರೈಸಿದರು.
ಚಿಂತಕ, ಶಿಕ್ಷಕ ಅರವಿಂದ ಚೊಕ್ಕಾಡಿ ಗುರು ಸಂದೇಶ ನೀಡಿ ವಿದ್ಯಾರ್ಥಿಗಳಿಗೆ ಶಿಕ್ಷಣ ಮಾರ್ಗದರ್ಶನವಿತ್ತರು. 2023-24ನೇ ಸಾಲಿನಲ್ಲಿ ಎಸೆಸೆಲ್ಸಿಯಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಗಳಿಸಿದ 30 ಮಂದಿ ಬಿಲ್ಲವ ವಿದ್ಯಾರ್ಥಿಗಳಿಗೆ ನಗದುಸಹಿತ ‘ಯುವಸಿರಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್ ಎಸ್ ಎಲ್ ಸಿಯಲ್ಲಿ ಮೂಡುಬಿದಿರೆ ವ್ಯಾಪ್ತಿಯಲ್ಲಿ ಪ್ರಥಮ ಸ್ಥಾನ ಪಡೆದ ಮಾನ್ಯ ಎನ್. ಪೂಜಾರಿ, ಪಿಯುಸಿಯಲ್ಲಿ ಮೂರು ವಿಭಾಗಗಳಲ್ಲಿ ಅತ್ಯಧಿಕ ಅಂಕ ಪಡೆದ ಶ್ರೇಯಾ, ಪ್ರತೀಕ್ಷಾ ಮತ್ತು ಸುಜ್ಞಾನ್ ಅವರನ್ನು ಸನ್ಮಾನಿಸಲಾಯಿತು.
ವಿಶುವಲ್ ಆರ್ಟ್ಸ್ ಪದವಿಯಲ್ಲಿ ದ್ವಿತೀಯ ರ್ಯಾಂಕ್ ಪಡೆದ ಶ್ರವಣ್ ಪೂಜಾರಿ, ಯುವವಾಹಿನಿ ಮಾಜಿ ಅಧ್ಯಕ್ಷ ಪ್ರಸ್ತುತ ಕೇಂದ್ರ ಸಮಿತಿ
ಕಾರ್ಯದರ್ಶಿಯಾಗಿರುವ ಜಗದೀಶ್ಚಂದ್ರ ಡಿ.ಕೆ., ವಿವಿಧ ವಿಭಾಗದಲ್ಲಿ ಸಹಕರಿಸುತ್ತಿರುವ ಸಂತೋಷ್ ಪಣಪಿಲ, ಹರಿಪ್ರಸಾದ್ ಹೊಸಂಗಡಿ, ಶೋಭಾ ಸುರೇಶ್ ಹಾಗೂ ಸ್ವಾಮಿ ಪ್ರಸಾದ್ ಅವರನ್ನು ಅಭಿನಂದಿಸಲಾಯಿತು. ಸುಮಾರು 60 ಮಂದಿ ವಿದ್ಯಾರ್ಥಿವೇತನ ಅರ್ಜಿ ನೋಂದಣಿ ನಡೆಸಲಾಗಿದ್ದು ಅವರವರ ಮನೆಗಳಿಗೆ ತೆರಳಿ ನೆರವು ನೀಡುವುದಾಗಿ ಪ್ರಕಟಿಸಲಾಯಿತು.
ಬಿಲ್ಲವ ಸಂಘದ ಅಧ್ಯಕ್ಷ ಸುರೇಶ್ ಕೆ. ಪೂಜಾರಿ, ಅಶೋಕ್ ಬಿ. ಉಪಸ್ಥಿತರಿದ್ದರು. ಯುವ ಸ್ಪಂದನ ಯೋಜನೆಯ ಅಧ್ಯಕ್ಷ ನವಾನಂದ ಸ್ವಾಗತಿಸಿದರು. ನೂತನ ಸದಸ್ಯರ ಸೇರ್ಪಡೆ ನಡೆಯಿತು. ಹರೀಶ್ ಕಾಪಿಕಾಡ್ ಮುಖ್ಯ ಅತಿಥಿಯನ್ನು ಪರಿಚಯಿಸಿದರು.
ಡಾ। ಯೋಗೀಶ್ ಕೈರೋಡಿ ಮತ್ತು ಪ್ರಭಾಕರ ಚಾಮುಂಡಿಬೆಟ್ಟ ನಿರೂಪಿಸಿದರು. ಕಾರ್ಯದರ್ಶಿ ಗಿರೀಶ್ ಕೋಟ್ಯಾನ್ ವಂದಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!