ಉಡುಪಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತದೆ ಎಂಬ ಕಾಂಗ್ರೆಸ್ ಆರೋಪವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಫೋಸ್ಟರ್ ಅಂಟಿಸುವ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
‘ತುರ್ತುಪರಿಸ್ಥಿತಿ ಹೇರಿದ ಇಂದಿರಾ ಸ್ವಾರ್ಥಕ್ಕಾಗಿ ಸಂವಿಧಾನ ದುರ್ಬಳಕೆ.! ಖರ್ಗೆ ಕ್ಷಮೆ ಕೇಳಲಿ’, ‘ಅವತ್ತು ತುರ್ತುಪರಿಸ್ಥಿತಿ ವಿರೋಧಿಸಿದ್ದ ಸಿದ್ದರಾಮಯ್ಯ ಇವತ್ತು ಮೌನ’, ‘ಸಂವಿಧಾನದ ಬಗ್ಗೆ ಮಾತನಾಡಲು ಕಾಂಗ್ರೆಸ್ ನವರಿಗೆ ನೈತಿಕತೆ ಎಲ್ಲಿದೆ’ ಹಾಗೂ ತುರ್ತುಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸಂವಿಧಾನಕ್ಕೆ ಮಾಡಿದ ದ್ರೋಹಕ್ಕೆ ರಾಹುಲ್ ಗಾಂಧಿ ಕ್ಷಮೆ ಕೇಳಲಿ’ ಈ ಮೊದಲಾದ ಬರಹವುಳ್ಳ ಪೋಸ್ಟರ್ ಅನ್ನು ಬಿಜೆಪಿ ಮುಖಂಡರು ಹಿಡಿದುಕೊಂಡು ಕಾಂಗ್ರೆಸ್ ಕಚೇರಿಗೆ ತೆರಳಲು ಮುಂದಾದರು. ಬಿಜೆಪಿ ಕಚೇರಿಯಿಂದ ತೆರಳಿದ ಬಿಜೆಪಿ ಮುಖಂಡರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದರು. ಪೊಲೀಸರ ಮನವಿಗೆ ಸ್ಪಂದಿಸಿದ ಮುಖಂಡರು ಪ್ರತಿಭಟನೆಯನ್ನು ಕೈಬಿಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು, ಕಾಂಗ್ರೆಸ್ ನವರು ಸಂವಿಧಾನ ವಿರೋಧಿ ಎಂದು ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಯಾರು ಸಂವಿಧಾನ ವಿರೋಧಿಗಳೆಂದು ಜನರಿಗೆ ಗೊತ್ತಾಗಬೇಕು. ತುರ್ತು ಪರಿಸ್ಥಿತಿಯನ್ನು ಹೇರಿದವರು ಯಾರು?, ತುರ್ತು ಪರಿಸ್ಥಿತಿಯಿಂದ ಎಷ್ಟು ಜನರಿಗೆ ತೊಂದರೆ ಆಗಿದೆ.?, ಎಷ್ಟು ಜನರ ಹಕ್ಕನ್ನು ಅವರು ಕಸಿದುಕೊಂಡಿದ್ದಾರೆ ಎನ್ನುವಂತಹ ಸತ್ಯ ಜನರಿಗೆ ಗೊತ್ತಾಗಬೇಕು. ಈ ಕಾರಣಕ್ಕಾಗಿ ಕಾಂಗ್ರೆಸ್ ಕಚೇರಿಗೆ ಪೋಸ್ಟರ್ ಅಂಟಿಸುವ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಶ್ಮಾಉದಯ್ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ, ಮಾಧ್ಯಮ ವಕ್ತಾರ ಶಿವಕುಮಾರ್ ಅಂಬಲಪಾಡಿ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಸಂಧ್ಯಾ ರಮೇಶ್, ಮುಖಂಡರಾದ ಶಾಮಲ ಕುಂದರ್, ಗಿರೀಶ್ ಅಂಚನ್ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…