ಉಡುಪಿ: ಉಡುಪಿಯಲ್ಲಿ ಉತ್ತರ ಭಾರತದ ಎನ್ಎಸ್ ಡಿ ವಿದ್ಯಾರ್ಥಿಗಳು ಯಕ್ಷಗಾನ ಪ್ರದರ್ಶನ ನೀಡಿದ್ದಾರೆ. ನಗರದ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಏಕಲವ್ಯ ಪ್ರಸಂಗವನ್ನು ಪ್ರಸ್ತುತಪಡಿಸಿದರು.
ಉತ್ತರ ಪ್ರದೇಶದ ವಾರಣಾಸಿಯಿಂದ ಬಂದು 20 ದಿನಗಳ ಕಾಲ ಯಕ್ಷಗಾನ ಅಭ್ಯಾಸ ಮಾಡಿ, ಏಕಲವ್ಯ ಪ್ರಸಂಗದ ಅದ್ಭುತ ಪ್ರದರ್ಶನ ನೀಡಿ ಕಲಾರಸಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 20 ಮಂದಿ ವಿದ್ಯಾರ್ಥಿಗಳ ತಂಡವನ್ನು ಗುರು ಬನ್ನಂಜೆ ಸಂಜೀವ ಸುವರ್ಣ ಅವರು ತರಬೇತುಗೊಳಿಸಿದ್ದರು.
ಮೂರು ವಾರಗಳ ತರಬೇತಿಯ ಬಳಿಕ ಹಿಂದಿ ಭಾಷೆಯಲ್ಲಿ ಏಕಲವ್ಯ ಪ್ರಸಂಗವನ್ನು ಅದ್ಭುತವಾಗಿ ಪ್ರದರ್ಶಿಸಿದ್ದಾರೆ. ಬಡಗುತಿಟ್ಟಿನ ಸಾಂಪ್ರದಾಯಿಕ ಹೆಜ್ಜೆಗಾರಿಕೆ, ಅಭಿನಯ ಸಂಭಾಷಣೆಗಳು ಪ್ರದರ್ಶನದಲ್ಲಿ ಅದ್ಭುತವಾಗಿ ಮೂಡಿ ಬಂದವು. ಪ್ರತಿದಿನ 12 ಗಂಟೆಗಳ ಕಾಲ ಅಭ್ಯಾಸ ಮಾಡಿದ ಈ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳ ತಂಡ, ಉಡುಪಿಯಲ್ಲಿ ಎರಡು ಪ್ರದರ್ಶನಗಳನ್ನು ನಡೆಸಲಿವೆ. ವಾರಣಾಸಿಗೆ ತೆರಳಿದ ಬಳಿಕ ಮತ್ತಷ್ಟು ಪ್ರದರ್ಶನಗಳು ಏರ್ಪಾಟ್ ಆಗಿವೆ. ಉತ್ತರ ಮತ್ತು ದಕ್ಷಿಣ ಭಾರತದ ಸಾಂಸ್ಕೃತಿಕ ಕೊಂಡಿಯಾಗಿ ಯಕ್ಷಗಾನವನ್ನು ರೂಪಿಸಿರುವುದು ಗುರುಬನ್ನಂಜೆ ಸಂಜೀವ ಸುವರ್ಣ ಅವರ ಹೆಗ್ಗಳಿಕೆಯಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…