ಉಡುಪಿ: ಉಡುಪಿಯಲ್ಲಿ ಉತ್ತರ ಭಾರತದ ಎನ್ಎಸ್ ಡಿ ವಿದ್ಯಾರ್ಥಿಗಳು ಯಕ್ಷಗಾನ ಪ್ರದರ್ಶನ ನೀಡಿದ್ದಾರೆ. ನಗರದ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಏಕಲವ್ಯ ಪ್ರಸಂಗವನ್ನು ಪ್ರಸ್ತುತಪಡಿಸಿದರು.
ಉತ್ತರ ಪ್ರದೇಶದ ವಾರಣಾಸಿಯಿಂದ ಬಂದು 20 ದಿನಗಳ ಕಾಲ ಯಕ್ಷಗಾನ ಅಭ್ಯಾಸ ಮಾಡಿ, ಏಕಲವ್ಯ ಪ್ರಸಂಗದ ಅದ್ಭುತ ಪ್ರದರ್ಶನ ನೀಡಿ ಕಲಾರಸಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 20 ಮಂದಿ ವಿದ್ಯಾರ್ಥಿಗಳ ತಂಡವನ್ನು ಗುರು ಬನ್ನಂಜೆ ಸಂಜೀವ ಸುವರ್ಣ ಅವರು ತರಬೇತುಗೊಳಿಸಿದ್ದರು.
ಮೂರು ವಾರಗಳ ತರಬೇತಿಯ ಬಳಿಕ ಹಿಂದಿ ಭಾಷೆಯಲ್ಲಿ ಏಕಲವ್ಯ ಪ್ರಸಂಗವನ್ನು ಅದ್ಭುತವಾಗಿ ಪ್ರದರ್ಶಿಸಿದ್ದಾರೆ. ಬಡಗುತಿಟ್ಟಿನ ಸಾಂಪ್ರದಾಯಿಕ ಹೆಜ್ಜೆಗಾರಿಕೆ, ಅಭಿನಯ ಸಂಭಾಷಣೆಗಳು ಪ್ರದರ್ಶನದಲ್ಲಿ ಅದ್ಭುತವಾಗಿ ಮೂಡಿ ಬಂದವು. ಪ್ರತಿದಿನ 12 ಗಂಟೆಗಳ ಕಾಲ ಅಭ್ಯಾಸ ಮಾಡಿದ ಈ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳ ತಂಡ, ಉಡುಪಿಯಲ್ಲಿ ಎರಡು ಪ್ರದರ್ಶನಗಳನ್ನು ನಡೆಸಲಿವೆ. ವಾರಣಾಸಿಗೆ ತೆರಳಿದ ಬಳಿಕ ಮತ್ತಷ್ಟು ಪ್ರದರ್ಶನಗಳು ಏರ್ಪಾಟ್ ಆಗಿವೆ. ಉತ್ತರ ಮತ್ತು ದಕ್ಷಿಣ ಭಾರತದ ಸಾಂಸ್ಕೃತಿಕ ಕೊಂಡಿಯಾಗಿ ಯಕ್ಷಗಾನವನ್ನು ರೂಪಿಸಿರುವುದು ಗುರುಬನ್ನಂಜೆ ಸಂಜೀವ ಸುವರ್ಣ ಅವರ ಹೆಗ್ಗಳಿಕೆಯಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…