ಉಡುಪಿ: ಉಡುಪಿಯಲ್ಲಿ ಉತ್ತರ ಭಾರತದ ಎನ್ಎಸ್ ಡಿ ವಿದ್ಯಾರ್ಥಿಗಳು ಯಕ್ಷಗಾನ ಪ್ರದರ್ಶನ ನೀಡಿದ್ದಾರೆ. ನಗರದ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಏಕಲವ್ಯ ಪ್ರಸಂಗವನ್ನು ಪ್ರಸ್ತುತಪಡಿಸಿದರು.
ಉತ್ತರ ಪ್ರದೇಶದ ವಾರಣಾಸಿಯಿಂದ ಬಂದು 20 ದಿನಗಳ ಕಾಲ ಯಕ್ಷಗಾನ ಅಭ್ಯಾಸ ಮಾಡಿ, ಏಕಲವ್ಯ ಪ್ರಸಂಗದ ಅದ್ಭುತ ಪ್ರದರ್ಶನ ನೀಡಿ ಕಲಾರಸಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 20 ಮಂದಿ ವಿದ್ಯಾರ್ಥಿಗಳ ತಂಡವನ್ನು ಗುರು ಬನ್ನಂಜೆ ಸಂಜೀವ ಸುವರ್ಣ ಅವರು ತರಬೇತುಗೊಳಿಸಿದ್ದರು.
ಮೂರು ವಾರಗಳ ತರಬೇತಿಯ ಬಳಿಕ ಹಿಂದಿ ಭಾಷೆಯಲ್ಲಿ ಏಕಲವ್ಯ ಪ್ರಸಂಗವನ್ನು ಅದ್ಭುತವಾಗಿ ಪ್ರದರ್ಶಿಸಿದ್ದಾರೆ. ಬಡಗುತಿಟ್ಟಿನ ಸಾಂಪ್ರದಾಯಿಕ ಹೆಜ್ಜೆಗಾರಿಕೆ, ಅಭಿನಯ ಸಂಭಾಷಣೆಗಳು ಪ್ರದರ್ಶನದಲ್ಲಿ ಅದ್ಭುತವಾಗಿ ಮೂಡಿ ಬಂದವು. ಪ್ರತಿದಿನ 12 ಗಂಟೆಗಳ ಕಾಲ ಅಭ್ಯಾಸ ಮಾಡಿದ ಈ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳ ತಂಡ, ಉಡುಪಿಯಲ್ಲಿ ಎರಡು ಪ್ರದರ್ಶನಗಳನ್ನು ನಡೆಸಲಿವೆ. ವಾರಣಾಸಿಗೆ ತೆರಳಿದ ಬಳಿಕ ಮತ್ತಷ್ಟು ಪ್ರದರ್ಶನಗಳು ಏರ್ಪಾಟ್ ಆಗಿವೆ. ಉತ್ತರ ಮತ್ತು ದಕ್ಷಿಣ ಭಾರತದ ಸಾಂಸ್ಕೃತಿಕ ಕೊಂಡಿಯಾಗಿ ಯಕ್ಷಗಾನವನ್ನು ರೂಪಿಸಿರುವುದು ಗುರುಬನ್ನಂಜೆ ಸಂಜೀವ ಸುವರ್ಣ ಅವರ ಹೆಗ್ಗಳಿಕೆಯಾಗಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…