ಬಂಟ್ವಾಳ: ಬೆಂಗಳೂರು ಭಾಗದಿಂದ ಆಗಮಿಸುವ ಕಂಟೈನರ್ ಲಾರಿಯೊಂದು, ಉಪ್ಪಿನಂಗಡಿ ಯಿಂದ ಸರಪಾಡಿ ಮಣಿಹಳ್ಳ ರಸ್ತೆ ಯಲ್ಲಿ ಆಗಮಿಸಿ, ಅಲ್ಲಿಪಾದೆ ಸಮೀಪದ ಅಣೇಜ ತಿರುವಿನಲ್ಲಿ ಸಿಲುಕಿಹಾಕಿಕೊಂಡ ಘಟನೆ ನಡೆದಿದೆ.
ಬಿಜಾಪುರ ಮೂಲದ ಲಾರಿಯು ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಆಗಮಿಸಿ,ಉಪ್ಪಿನಂಗಡಿಯಲ್ಲಿ ಮಂಗಳೂರು ತೆರಳಲು ಚಾಲಕ ಗೂಗಲ್ ಮೇಪ್ ಹಾಕಿದ ಸಂದರ್ಭ ಆತನಿಗೆ ಉಪ್ಪಿನಂಗಡಿ ಅಜಿಲಮೊಗರು ಮಣಿಹಳ್ಳ ರಸ್ತೆಯ ಮೂಲಕ ಸಾಗಿ,ಮಂಗಳೂರಿಗೆ ತೆರಳುಲು ಸೂಚಿಸಿದೆ.
ಪ್ರಸ್ತುತ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಗೂಗಲ್ ಮೇಪ್ ಈ ರಸ್ತೆಯನ್ನು ಸೂಚಿಸುತ್ತಿದೆ.ಆದರೆ ಈ ರಸ್ತೆಯು ಘನವಾಹನ ಸಾಗಾಟಕ್ಕೆ ಸೂಕ್ತವಾಗಿಲ್ಲ. ಅಣೇಜದಲ್ಲಿ ಅಪಾಯಕಾರಿ ತಿರುವು ಇರುವುದರಿಂದ ಒಂದೇ ಬಾರಿಗೆ ವಾಹನ ತಿರುವು ಪಡೆದು ಕೊಳ್ಳುವುದಿಲ್ಲ.ಎರಡು ಮೂರು ಬಾರಿ ಹಿಂದೆ ಮುಂದೆ ಚಲಿಸಿ ತಿರುಗಿಸಬೇಕಿದೆ.ಪ್ರಸ್ತುತ ಈ ಲಾರಿಯು ಮುಂದೆ ಹೋಗಿದ್ದು,ಆದರೆ ಹಿಂದೆ ಬರಲು ಸಾಧ್ಯವಾಗಿಲ್ಲ. ಈಗಾಗಿ ಸರಪಾಡಿ ಬಿಸಿರೋಡು ಸಂಚರಿಸುವ ಬಸ್ ಗಳು ಪರ್ಯಾಯ ರಸ್ತೆಯಲ್ಲಿ ಸಂಚರಿಸಿದ್ದು, ಈಗಾಗಿ ಸರಪಾಡಿ ಮಣಿನಾಲ್ಕೂರು ಗ್ರಾಮದ ಗ್ರಾಮಸ್ಥರು ತೊಂದರೆ ಅನುಭವಿಸಬೇಕಾಯಿತು
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…