ಉಡುಪಿ: ನಿಲ್ಲಿಸಿದ್ದ ಬಸ್ ಗೆ ಫಾರ್ಚೂನರ್ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ಶೋರೂಂಗೆ ಹೋಗುತ್ತಿದ್ದ ಹೊಚ್ಚ ಹೊಸ ಫಾರ್ಚೂನರ್ ಕಾರು ಅಪಘಾತಕ್ಕೀಡಾಗಿದೆ. ಕುಂದಾಪುರ ಶೋರೂಂ ನಿಂದ ಮಂಗಳೂರು ಶೋರೂಂಗೆ ಹೊಸ ಕಾರನ್ನು ಚಾಲಕ ಕೊಂಡೊಯ್ಯುತ್ತಿದ್ದನು. ನಿಟ್ಟೂರಿಗೆ ತಲುಪುತ್ತಿದ್ದಂತೆಯೇ ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಿಟಿ ಬಸ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಬಸ್ ನ ಹಿಂಬದಿಗೂ ಹಾನಿಯಾಗಿದೆ. ಕಾರು ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದೆ. ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ಮಾಹಿತಿ ತಿಳಿದ ಕೂಡಲೇ ಶೋರೂಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…