ಜನ ಮನದ ನಾಡಿ ಮಿಡಿತ

Advertisement

ಪತ್ನಿ ಮನೆಗೆ ಹೋಗಿ ಬರುವ ವೇಳೆ ರಸ್ತೆ ಅಪಘಾತ, ಪತಿ ಸ್ಥಳದಲ್ಲೆ ಮೃತ್ಯು.

ಹುಣಸೂರು: ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೆದ್ದಾರಿಯ ನಾಗಮಂಗಲ ಗೇಟ್ ಬಳಿ ನಡೆದಿದೆ.

ಹುಣಸೂರು ತಾಲೂಕಿನ ಕುರುಬರ ಹೊಸಹಳ್ಳಿಯ ರವಿ ಅವರ ಪುತ್ರ ಮಂಜು (26) ಮೃತಪಟ್ಟವರು. ಮೃತರು ತಂದೆ, ತಾಯಿ, ಪತ್ನಿ ಮತ್ತು 3 ತಿಂಗಳ ಮಗುವನ್ನು ಅಗಲಿದ್ದಾರೆ.
ಪತ್ನಿ ಮನೆ ಪಿರಿಯಾಪಟ್ಟಣಕ್ಕೆ ತೆರಳಿ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದ ವೇಳೆ ವಾಹನ ಹಿಂದಿಕ್ಕುವ ಭರದಲ್ಲಿ ಹುಣಸೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿಹೊಡೆದ ಪರಿಣಾಮ ತಲೆ. ಕೈಕಾಲಗಳಿಗೆ ತೀವ್ರಗಾಯವಾಗಿ ಮಂಜು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಗ್ರಾಮಾಂತರ ಠಾಣೆ ಪೊಲೀಸರು ಶವವನ್ನು ಶವಾಗಾರಕ್ಕೆ ಸಾಗಿಸಿ ಬಸ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಈ ವೇಳೆ ಇನ್ಸ್ ಪೆಕ್ಟರ್ ಮುನಿಸ್ವಾಮಿ. ಹುಣಸೂರು ಡಿಪೋ ವ್ಯವಸ್ಥಾಪಕ ಸುಬ್ರಮಣ್ಯ ಭೇಟಿ ಇತ್ತು ಪರಿಶೀಲಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

error: Content is protected !!