ಹುಣಸೂರು: ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೆದ್ದಾರಿಯ ನಾಗಮಂಗಲ ಗೇಟ್ ಬಳಿ ನಡೆದಿದೆ.
ಹುಣಸೂರು ತಾಲೂಕಿನ ಕುರುಬರ ಹೊಸಹಳ್ಳಿಯ ರವಿ ಅವರ ಪುತ್ರ ಮಂಜು (26) ಮೃತಪಟ್ಟವರು. ಮೃತರು ತಂದೆ, ತಾಯಿ, ಪತ್ನಿ ಮತ್ತು 3 ತಿಂಗಳ ಮಗುವನ್ನು ಅಗಲಿದ್ದಾರೆ.
ಪತ್ನಿ ಮನೆ ಪಿರಿಯಾಪಟ್ಟಣಕ್ಕೆ ತೆರಳಿ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದ ವೇಳೆ ವಾಹನ ಹಿಂದಿಕ್ಕುವ ಭರದಲ್ಲಿ ಹುಣಸೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿಹೊಡೆದ ಪರಿಣಾಮ ತಲೆ. ಕೈಕಾಲಗಳಿಗೆ ತೀವ್ರಗಾಯವಾಗಿ ಮಂಜು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಗ್ರಾಮಾಂತರ ಠಾಣೆ ಪೊಲೀಸರು ಶವವನ್ನು ಶವಾಗಾರಕ್ಕೆ ಸಾಗಿಸಿ ಬಸ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಈ ವೇಳೆ ಇನ್ಸ್ ಪೆಕ್ಟರ್ ಮುನಿಸ್ವಾಮಿ. ಹುಣಸೂರು ಡಿಪೋ ವ್ಯವಸ್ಥಾಪಕ ಸುಬ್ರಮಣ್ಯ ಭೇಟಿ ಇತ್ತು ಪರಿಶೀಲಿಸಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…