ಹುಣಸೂರು: ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೆದ್ದಾರಿಯ ನಾಗಮಂಗಲ ಗೇಟ್ ಬಳಿ ನಡೆದಿದೆ.
ಹುಣಸೂರು ತಾಲೂಕಿನ ಕುರುಬರ ಹೊಸಹಳ್ಳಿಯ ರವಿ ಅವರ ಪುತ್ರ ಮಂಜು (26) ಮೃತಪಟ್ಟವರು. ಮೃತರು ತಂದೆ, ತಾಯಿ, ಪತ್ನಿ ಮತ್ತು 3 ತಿಂಗಳ ಮಗುವನ್ನು ಅಗಲಿದ್ದಾರೆ.
ಪತ್ನಿ ಮನೆ ಪಿರಿಯಾಪಟ್ಟಣಕ್ಕೆ ತೆರಳಿ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದ ವೇಳೆ ವಾಹನ ಹಿಂದಿಕ್ಕುವ ಭರದಲ್ಲಿ ಹುಣಸೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿಹೊಡೆದ ಪರಿಣಾಮ ತಲೆ. ಕೈಕಾಲಗಳಿಗೆ ತೀವ್ರಗಾಯವಾಗಿ ಮಂಜು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಗ್ರಾಮಾಂತರ ಠಾಣೆ ಪೊಲೀಸರು ಶವವನ್ನು ಶವಾಗಾರಕ್ಕೆ ಸಾಗಿಸಿ ಬಸ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಈ ವೇಳೆ ಇನ್ಸ್ ಪೆಕ್ಟರ್ ಮುನಿಸ್ವಾಮಿ. ಹುಣಸೂರು ಡಿಪೋ ವ್ಯವಸ್ಥಾಪಕ ಸುಬ್ರಮಣ್ಯ ಭೇಟಿ ಇತ್ತು ಪರಿಶೀಲಿಸಿದರು.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…