ಕರಾವಳಿ

“ಪಾಸಿಟಿವ್ ವರದಿಗಳು ಕೋಮು ಸೌಹಾರ್ದತೆಗೆ ಪೂರಕ” -ಕಮಿಷನರ್ ಅನುಪಮ್ ಅಗರ್ವಾಲ್

ಪತ್ರಕರ್ತ ಮಿಥುನ್ ಕೊಡೆತ್ತೂರುಗೆ “ಬ್ರಾಂಡ್ ಮಂಗಳೂರು” ಪ್ರಶಸ್ತಿ ಪ್ರದಾನ

ಮಂಗಳೂರು: ಸೌಹಾರ್ದ ಮಂಗಳೂರು ಸ್ಥಾಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಬ್ರಾಂಡ್ ಮಂಗಳೂರು 2024ನೇ ಪ್ರಶಸ್ತಿಯನ್ನು ಹೊಸದಿಗಂತ ಪತ್ರಿಕೆಯ ವರದಿಗಾರ ಮಿಥುನ್ ಕೊಡೆತ್ತೂರು ಅವರಿಗೆ ಪ್ರದಾನ ಮಾಡಲಾಯಿತು. ನಗರದ ಪತ್ರಿಕಾ ಭವನದಲ್ಲಿ ಜರುಗಿದ ಸರಳ ಕಾರ್ಯಕ್ರಮದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಪ್ರಶಸ್ತಿ ಪ್ರದಾನಗೈದು ಮಾತಾಡಿದರು.
“ಪ್ರತಿಯೊಂದು ಕಡೆಯಲ್ಲೂ ಪಾಸಿಟಿವ್ ಮತ್ತು ನೆಗೆಟಿವ್ ಅಭಿಪ್ರಾಯ ಇದ್ದೇ ಇರುತ್ತದೆ. ನಾವು ನೋಡುವ ರೀತಿ ಪಾಸಿಟಿವ್ ಆಗಿದ್ದರೆ ಎಲ್ಲವೂ ಪಾಸಿಟಿವ್ ಆಗಿಯೇ ಗೋಚರಿಸುತ್ತದೆ. ಮಂಗಳೂರು ಅನ್ನುವುದೇ ಒಂದು ದೊಡ್ಡ ಬ್ರಾಂಡ್. ಬೇರೆ ಕಡೆಗಿಂತ ಇಲ್ಲಿನ ಜನರು ಭಿನ್ನವಾಗಿದ್ದಾರೆ. ಇಲ್ಲಿನ ಜನರು ವಿಶ್ವದಲ್ಲಿ ಗುರುತಿಸಲ್ಪಡುತ್ತಿದ್ದಾರೆ. ಕಳೆದೆರಡು ದಶಕಗಳಿಂದ ಇಲ್ಲಿ ಕೋಮು ಗಲಭೆ, ವೈಷಮ್ಯ ಬೆಳೆದಿದೆ. ಇದನ್ನು ಮಟ್ಟಹಾಕಲು ಪತ್ರಕರ್ತರ ನೆರವು ಅಗತ್ಯ. ಪಾಸಿಟಿವ್ ವರದಿಗಳ ಅಗತ್ಯವಿದೆ. ಆ ಕೆಲಸವನ್ನು ಮಾಡುವ ಪತ್ರಕರ್ತರಿಗೆ ಪ್ರಶಸ್ತಿ ನೀಡುವುದು ಖುಷಿಯ ವಿಚಾರ” ಎಂದರು.


ಬಳಿಕ ಮಾತಾಡಿದ ಮಿಥುನ್ ಕೊಡೆತ್ತೂರು ಅವರು, “ಸಮಾಜದಲ್ಲಿ ಹಿಂದೂ ಮುಸ್ಲಿಂ ಕ್ರೈಸ್ತರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ದೇವಸ್ಥಾನಗಳಿಗೆ ಹೂವು ಕೊಂಡೊಯ್ಯುವಾಗ ಅದನ್ನು ಮುಸ್ಲಿಮರು ಅಥವಾ ಕ್ರೈಸ್ತರು ಬೆಳೆದಿದ್ದಾರೆಯೇ ಎಂದು ನೋಡುವುದಿಲ್ಲ. ಅದೇ ರೀತಿ ತಿನ್ನುವ ಅನ್ನ ಯಾರು ಬೆಳೆದಿದ್ದಾರೆ ಅನ್ನೋದು ತಿಳಿದಿರುವುದಿಲ್ಲ. ಎಲ್ಲವೂ ನಮ್ಮಲ್ಲಿನ ಚಿಂತನೆಯಲ್ಲಿ ಅಡಕವಾಗಿರುತ್ತದೆ” ಎಂದರು.
ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, “ದಕ್ಷಿಣ ಕನ್ನಡ ಜಿಲ್ಲೆಯ ಜನರು ಪರಿಶ್ರಮದಿಂದ ಮೇಲೆ ಬಂದವರು. ಇಲ್ಲಿನ ಜನರು ಎಲ್ಲ ಭಾಷೆಯನ್ನು ಮಾತಾಡುತ್ತಾರೆ. ಮಂಗಳೂರಲ್ಲಿ ಹುಟ್ಟಿರುವುದೇ ನಮ್ಮೆಲ್ಲರ ಭಾಗ್ಯ. ಇಲ್ಲಿನ ಪತ್ರಕರ್ತರು ಸಾಮಾಜಿಕ ವ್ಯವಸ್ಥೆಯಲ್ಲಿನ ಸರಿ ತಪ್ಪುಗಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಾರೆ. ಕೋಮು ಸೌಹಾರ್ದ ಸ್ಥಾಪಿಸುವ ನಿಟ್ಟಿನಲ್ಲಿ ಬ್ರಾಂಡ್ ಮಂಗಳೂರು ಪ್ರಶಸ್ತಿಯನ್ನು ಪತ್ರಕರ್ತರ ಸಂಘ ಕೊಡುತ್ತಿರುವುದು ಒಳ್ಳೆಯ ವಿಚಾರ” ಎಂದರು.
ವೇದಿಕೆಯಲ್ಲಿ ಕ್ಯಾ. ಗಣೇಶ್ ಕಾರ್ಣಿಕ್, ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೋ, ಆಯುಷ್ ಇಲಾಖೆಯ ಮುಹಮ್ಮದ್ ಇಕ್ಬಾಲ್, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮತ್ತಿತರರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತನ್ನಾಡಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್ ನಿರೂಪಿಸಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…

21 mins ago

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…

27 mins ago

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…

6 hours ago

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…

6 hours ago

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

23 hours ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

23 hours ago