ಉಡುಪಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದು ಏಕಾಏಕಿಯಾಗಿ ಹೊತ್ತಿ ಉರಿದ ಘಟನೆ ಮಣಿಪಾಲ ಎಂಐಟಿ ಬಸ್ ನಿಲ್ದಾಣದ ಬಳಿ ಗುರುವಾರ ತಡರಾತ್ರಿ ಸಂಭವಿಸಿದೆ. ಕಾರಿನೊಳಗೆ ಮಲಗಿದ್ದ ಇಬ್ಬರು ಪವಾಡ ಸದೃಶವಾಗಿ ಪಾರಾಗಿದ್ದಾರೆ.
ಕುಂದಾಪುರದಿಂದ ಕೆಎಂಸಿ ಆಸ್ಪತ್ರೆಗೆ ಬಂದ ರೋಗಿಗಳ ಕಡೆಯವರ ಕಾರು ಎಂದು ತಿಳಿದುಬಂದಿದೆ. ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿ ಬಳಿಕ ಇಬ್ಬರು ಮಣಿಪಾಲ ಎಂಐಟಿ ಬಸ್ ನಿಲ್ದಾಣಕ್ಕಿಂತ ಸ್ವಲ್ಪ ಕೆಳಗೆ ಇಳಿಜಾರಿನಲ್ಲಿ ಕಾರನ್ನು ನಿಲ್ಲಿಸಿ ಒಳಗಡೆ ಮಲಗಿದ್ದರು ಎನ್ನಲಾಗಿದೆ. ಸುಮಾರು ತಡರಾತ್ರಿ 1.45 ರ ವೇಳೆಗೆ ಏಕಾಏಕಿಯಾಗಿ ಕಾರಿಗೆ ಬೆಂಕಿ ಹತ್ತಿಕೊಂಡದ್ದು, ತಕ್ಷಣವೇ ಇಬ್ಬರೂ ಹೊರಗೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಧಗಧಗವಾಗಿ ಹೊತ್ತಿಉರಿಯುತ್ತಿದ್ದಂತೆ ಹ್ಯಾಂಡ್ ಬ್ರೇಕ್ ಮುಕ್ತವಾದ ಕಾರು ಹಿಮ್ಮುಖವಾಗಿ ಚಲಿಸಿದೆ. ಹೀಗೆ ಹಿಂದಕ್ಕೆ ಚಲಿಸುತ್ತಿದ್ದ ಕಾರನ್ನು ನಿನ್ನೆ ಗಾಳಿ ಮಳೆಗೆ ಮುರಿದು ಬಿದ್ದ ಮರದ ಗೆಲ್ಲೊಂದು ತಡೆದಿದೆ. ಇದರಿಂದ ಸಂಭವನೀಯ ಅನಾಹುತವೊಂದು ತಪ್ಪಿದೆ. ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…