ಉಡುಪಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದು ಏಕಾಏಕಿಯಾಗಿ ಹೊತ್ತಿ ಉರಿದ ಘಟನೆ ಮಣಿಪಾಲ ಎಂಐಟಿ ಬಸ್ ನಿಲ್ದಾಣದ ಬಳಿ ಗುರುವಾರ ತಡರಾತ್ರಿ ಸಂಭವಿಸಿದೆ. ಕಾರಿನೊಳಗೆ ಮಲಗಿದ್ದ ಇಬ್ಬರು ಪವಾಡ ಸದೃಶವಾಗಿ ಪಾರಾಗಿದ್ದಾರೆ.
ಕುಂದಾಪುರದಿಂದ ಕೆಎಂಸಿ ಆಸ್ಪತ್ರೆಗೆ ಬಂದ ರೋಗಿಗಳ ಕಡೆಯವರ ಕಾರು ಎಂದು ತಿಳಿದುಬಂದಿದೆ. ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿ ಬಳಿಕ ಇಬ್ಬರು ಮಣಿಪಾಲ ಎಂಐಟಿ ಬಸ್ ನಿಲ್ದಾಣಕ್ಕಿಂತ ಸ್ವಲ್ಪ ಕೆಳಗೆ ಇಳಿಜಾರಿನಲ್ಲಿ ಕಾರನ್ನು ನಿಲ್ಲಿಸಿ ಒಳಗಡೆ ಮಲಗಿದ್ದರು ಎನ್ನಲಾಗಿದೆ. ಸುಮಾರು ತಡರಾತ್ರಿ 1.45 ರ ವೇಳೆಗೆ ಏಕಾಏಕಿಯಾಗಿ ಕಾರಿಗೆ ಬೆಂಕಿ ಹತ್ತಿಕೊಂಡದ್ದು, ತಕ್ಷಣವೇ ಇಬ್ಬರೂ ಹೊರಗೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಧಗಧಗವಾಗಿ ಹೊತ್ತಿಉರಿಯುತ್ತಿದ್ದಂತೆ ಹ್ಯಾಂಡ್ ಬ್ರೇಕ್ ಮುಕ್ತವಾದ ಕಾರು ಹಿಮ್ಮುಖವಾಗಿ ಚಲಿಸಿದೆ. ಹೀಗೆ ಹಿಂದಕ್ಕೆ ಚಲಿಸುತ್ತಿದ್ದ ಕಾರನ್ನು ನಿನ್ನೆ ಗಾಳಿ ಮಳೆಗೆ ಮುರಿದು ಬಿದ್ದ ಮರದ ಗೆಲ್ಲೊಂದು ತಡೆದಿದೆ. ಇದರಿಂದ ಸಂಭವನೀಯ ಅನಾಹುತವೊಂದು ತಪ್ಪಿದೆ. ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.
ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…
ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…