ಜನ ಮನದ ನಾಡಿ ಮಿಡಿತ

Advertisement

ನಿನ್ನೆಯಷ್ಟೇ ಸ್ಥಳಾಂತರಗೊಳಿಸಲಾಗಿದ್ದ ಮನೆಮಂದಿಯ ಮನೆ ಇಂದು ಸಮುದ್ರಪಾಲು!!

ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿ ಸಮುದ್ರತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ನಿನ್ನಯಷ್ಟೇ ಸೋಮೇಶ್ವರ ಪುರಸಭೆ ಅಧಿಕಾರಿಗಳು ಸ್ಥಳಾಂತರಗೊಳಿಸಿದ್ದ ಬೀಫಾತುಮ್ಮ ಮನೆ ಇಂದು ಸಂಜೆ ವೇಳೆ ಸಂಪೂರ್ಣ ಸಮುದ್ರಪಾಲಾಗಿದೆ. ಅಪಾಯದಲ್ಲಿರುವ ಇನ್ನೆರಡು ಮನೆಮಂದಿಯನ್ನು ಇಂದು ಸ್ಥಳಾಂತರಿಸಲಾಗಿದೆ.


ಮದನಿ ನಗರದಲ್ಲಿ ಸಂಭವಿಸಿದ ಘೋರ ದುರಂತದ ಹಿನ್ನೆಲೆಯಲ್ಲಿ ಇನ್ನೊಂದು ದುರಂತ ಸಂಭವಿಸದಿರಲಿ ಎಂಬ ಕಾರಣದಿಂದ ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತ್ತಾಡಿ, ತಹಶೀಲ್ದಾರ್ ಪ್ರದೀಪ್ ಕೋರ್ಡೇಕರ್ ಸಹಿತ ಹಲವು ಅಧಿಕಾರಿಗಳು ಜೂ.26 ಕ್ಕೆ ಉಚ್ಚಿಲ ಬಟ್ಟಪ್ಪಾಡಿಗೆ ತೆರಳಿ ಬೀಫಾತುಮ್ಮ ಮನೆಯ ಐದು ಮಂದಿಯನ್ನು ಸ್ಥಳಾಂತರಿಸಿದ್ದರು. ಅವರು ಸಂಬಂಧಿಕರ ಮನೆಗೆ ತೆರಳಿ ಇಂದು ಕೋಟೆಕಾರಿನಲ್ಲಿರುವ ಬಾಡಿಗೆ ಮನೆಗೆ ತೆರಳಿದ್ದಾರೆ. ಈ ಬಾಡಿಗೆ ಮನೆಯ ಮೂರು ತಿಂಗಳ ಬಾಡಿಗೆ ಸರಕಾರ ಭರಿಸಲಿದೆ. ಇಂದು ಬೀಫಾತುಮ್ಮ ಮನೆ ಸಮುದ್ರಪಾಲಾಗುತ್ತಿದ್ದಂತೆ ಅಲಿಮಮ್ಮ ಕುಟುಂಬದ 11 ಮಂದಿ ಹಾಗೂ ಸೌದಾ ಎಂಬವರ ಮನೆಯ 6 ಮಂದಿಯನ್ನು ಅವರ ಸಂಬಂಧಿಕರ ಮನೆಗೆ ಸ್ಥಳಾಂತರಗೊಳಿಸಲಾಗಿದೆ.
ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಮುದ್ರತೀರದ ಮನೆಮಂದಿ ಎಚ್ಚರಿಕೆಯಿಂದ ಇರಲು ಉಳ್ಳಾಲ ತಾಲೂಕು ತಹಶೀಲ್ದಾರ್ ಸೂಚಿಸಿದ್ದಾರೆ. ಅಗತ್ಯಬಿದ್ದಲ್ಲಿ ಅಪಾಯದಂಚಿನಲ್ಲಿ ಇರುವ ಇನ್ನಷ್ಟು ಮನೆಮಂದಿಗೆ ಬಾಡಿಗೆ ಮನೆಗಳನ್ನು ಗುರುತಿಸಿ ಮೂರು ತಿಂಗಳುಗಳ ಬಾಡಿಗೆಯನ್ನು ಸರಕಾರ ಭರಿಸಲಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

error: Content is protected !!