ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿ ಸಮುದ್ರತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ನಿನ್ನಯಷ್ಟೇ ಸೋಮೇಶ್ವರ ಪುರಸಭೆ ಅಧಿಕಾರಿಗಳು ಸ್ಥಳಾಂತರಗೊಳಿಸಿದ್ದ ಬೀಫಾತುಮ್ಮ ಮನೆ ಇಂದು ಸಂಜೆ ವೇಳೆ ಸಂಪೂರ್ಣ ಸಮುದ್ರಪಾಲಾಗಿದೆ. ಅಪಾಯದಲ್ಲಿರುವ ಇನ್ನೆರಡು ಮನೆಮಂದಿಯನ್ನು ಇಂದು ಸ್ಥಳಾಂತರಿಸಲಾಗಿದೆ.
ಮದನಿ ನಗರದಲ್ಲಿ ಸಂಭವಿಸಿದ ಘೋರ ದುರಂತದ ಹಿನ್ನೆಲೆಯಲ್ಲಿ ಇನ್ನೊಂದು ದುರಂತ ಸಂಭವಿಸದಿರಲಿ ಎಂಬ ಕಾರಣದಿಂದ ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತ್ತಾಡಿ, ತಹಶೀಲ್ದಾರ್ ಪ್ರದೀಪ್ ಕೋರ್ಡೇಕರ್ ಸಹಿತ ಹಲವು ಅಧಿಕಾರಿಗಳು ಜೂ.26 ಕ್ಕೆ ಉಚ್ಚಿಲ ಬಟ್ಟಪ್ಪಾಡಿಗೆ ತೆರಳಿ ಬೀಫಾತುಮ್ಮ ಮನೆಯ ಐದು ಮಂದಿಯನ್ನು ಸ್ಥಳಾಂತರಿಸಿದ್ದರು. ಅವರು ಸಂಬಂಧಿಕರ ಮನೆಗೆ ತೆರಳಿ ಇಂದು ಕೋಟೆಕಾರಿನಲ್ಲಿರುವ ಬಾಡಿಗೆ ಮನೆಗೆ ತೆರಳಿದ್ದಾರೆ. ಈ ಬಾಡಿಗೆ ಮನೆಯ ಮೂರು ತಿಂಗಳ ಬಾಡಿಗೆ ಸರಕಾರ ಭರಿಸಲಿದೆ. ಇಂದು ಬೀಫಾತುಮ್ಮ ಮನೆ ಸಮುದ್ರಪಾಲಾಗುತ್ತಿದ್ದಂತೆ ಅಲಿಮಮ್ಮ ಕುಟುಂಬದ 11 ಮಂದಿ ಹಾಗೂ ಸೌದಾ ಎಂಬವರ ಮನೆಯ 6 ಮಂದಿಯನ್ನು ಅವರ ಸಂಬಂಧಿಕರ ಮನೆಗೆ ಸ್ಥಳಾಂತರಗೊಳಿಸಲಾಗಿದೆ.
ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಮುದ್ರತೀರದ ಮನೆಮಂದಿ ಎಚ್ಚರಿಕೆಯಿಂದ ಇರಲು ಉಳ್ಳಾಲ ತಾಲೂಕು ತಹಶೀಲ್ದಾರ್ ಸೂಚಿಸಿದ್ದಾರೆ. ಅಗತ್ಯಬಿದ್ದಲ್ಲಿ ಅಪಾಯದಂಚಿನಲ್ಲಿ ಇರುವ ಇನ್ನಷ್ಟು ಮನೆಮಂದಿಗೆ ಬಾಡಿಗೆ ಮನೆಗಳನ್ನು ಗುರುತಿಸಿ ಮೂರು ತಿಂಗಳುಗಳ ಬಾಡಿಗೆಯನ್ನು ಸರಕಾರ ಭರಿಸಲಿದೆ ಎಂದಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…