ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿ ಸಮುದ್ರತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ನಿನ್ನಯಷ್ಟೇ ಸೋಮೇಶ್ವರ ಪುರಸಭೆ ಅಧಿಕಾರಿಗಳು ಸ್ಥಳಾಂತರಗೊಳಿಸಿದ್ದ ಬೀಫಾತುಮ್ಮ ಮನೆ ಇಂದು ಸಂಜೆ ವೇಳೆ ಸಂಪೂರ್ಣ ಸಮುದ್ರಪಾಲಾಗಿದೆ. ಅಪಾಯದಲ್ಲಿರುವ ಇನ್ನೆರಡು ಮನೆಮಂದಿಯನ್ನು ಇಂದು ಸ್ಥಳಾಂತರಿಸಲಾಗಿದೆ.
ಮದನಿ ನಗರದಲ್ಲಿ ಸಂಭವಿಸಿದ ಘೋರ ದುರಂತದ ಹಿನ್ನೆಲೆಯಲ್ಲಿ ಇನ್ನೊಂದು ದುರಂತ ಸಂಭವಿಸದಿರಲಿ ಎಂಬ ಕಾರಣದಿಂದ ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತ್ತಾಡಿ, ತಹಶೀಲ್ದಾರ್ ಪ್ರದೀಪ್ ಕೋರ್ಡೇಕರ್ ಸಹಿತ ಹಲವು ಅಧಿಕಾರಿಗಳು ಜೂ.26 ಕ್ಕೆ ಉಚ್ಚಿಲ ಬಟ್ಟಪ್ಪಾಡಿಗೆ ತೆರಳಿ ಬೀಫಾತುಮ್ಮ ಮನೆಯ ಐದು ಮಂದಿಯನ್ನು ಸ್ಥಳಾಂತರಿಸಿದ್ದರು. ಅವರು ಸಂಬಂಧಿಕರ ಮನೆಗೆ ತೆರಳಿ ಇಂದು ಕೋಟೆಕಾರಿನಲ್ಲಿರುವ ಬಾಡಿಗೆ ಮನೆಗೆ ತೆರಳಿದ್ದಾರೆ. ಈ ಬಾಡಿಗೆ ಮನೆಯ ಮೂರು ತಿಂಗಳ ಬಾಡಿಗೆ ಸರಕಾರ ಭರಿಸಲಿದೆ. ಇಂದು ಬೀಫಾತುಮ್ಮ ಮನೆ ಸಮುದ್ರಪಾಲಾಗುತ್ತಿದ್ದಂತೆ ಅಲಿಮಮ್ಮ ಕುಟುಂಬದ 11 ಮಂದಿ ಹಾಗೂ ಸೌದಾ ಎಂಬವರ ಮನೆಯ 6 ಮಂದಿಯನ್ನು ಅವರ ಸಂಬಂಧಿಕರ ಮನೆಗೆ ಸ್ಥಳಾಂತರಗೊಳಿಸಲಾಗಿದೆ.
ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಮುದ್ರತೀರದ ಮನೆಮಂದಿ ಎಚ್ಚರಿಕೆಯಿಂದ ಇರಲು ಉಳ್ಳಾಲ ತಾಲೂಕು ತಹಶೀಲ್ದಾರ್ ಸೂಚಿಸಿದ್ದಾರೆ. ಅಗತ್ಯಬಿದ್ದಲ್ಲಿ ಅಪಾಯದಂಚಿನಲ್ಲಿ ಇರುವ ಇನ್ನಷ್ಟು ಮನೆಮಂದಿಗೆ ಬಾಡಿಗೆ ಮನೆಗಳನ್ನು ಗುರುತಿಸಿ ಮೂರು ತಿಂಗಳುಗಳ ಬಾಡಿಗೆಯನ್ನು ಸರಕಾರ ಭರಿಸಲಿದೆ ಎಂದಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…