ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿ ಸಮುದ್ರತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ನಿನ್ನಯಷ್ಟೇ ಸೋಮೇಶ್ವರ ಪುರಸಭೆ ಅಧಿಕಾರಿಗಳು ಸ್ಥಳಾಂತರಗೊಳಿಸಿದ್ದ ಬೀಫಾತುಮ್ಮ ಮನೆ ಇಂದು ಸಂಜೆ ವೇಳೆ ಸಂಪೂರ್ಣ ಸಮುದ್ರಪಾಲಾಗಿದೆ. ಅಪಾಯದಲ್ಲಿರುವ ಇನ್ನೆರಡು ಮನೆಮಂದಿಯನ್ನು ಇಂದು ಸ್ಥಳಾಂತರಿಸಲಾಗಿದೆ.
ಮದನಿ ನಗರದಲ್ಲಿ ಸಂಭವಿಸಿದ ಘೋರ ದುರಂತದ ಹಿನ್ನೆಲೆಯಲ್ಲಿ ಇನ್ನೊಂದು ದುರಂತ ಸಂಭವಿಸದಿರಲಿ ಎಂಬ ಕಾರಣದಿಂದ ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತ್ತಾಡಿ, ತಹಶೀಲ್ದಾರ್ ಪ್ರದೀಪ್ ಕೋರ್ಡೇಕರ್ ಸಹಿತ ಹಲವು ಅಧಿಕಾರಿಗಳು ಜೂ.26 ಕ್ಕೆ ಉಚ್ಚಿಲ ಬಟ್ಟಪ್ಪಾಡಿಗೆ ತೆರಳಿ ಬೀಫಾತುಮ್ಮ ಮನೆಯ ಐದು ಮಂದಿಯನ್ನು ಸ್ಥಳಾಂತರಿಸಿದ್ದರು. ಅವರು ಸಂಬಂಧಿಕರ ಮನೆಗೆ ತೆರಳಿ ಇಂದು ಕೋಟೆಕಾರಿನಲ್ಲಿರುವ ಬಾಡಿಗೆ ಮನೆಗೆ ತೆರಳಿದ್ದಾರೆ. ಈ ಬಾಡಿಗೆ ಮನೆಯ ಮೂರು ತಿಂಗಳ ಬಾಡಿಗೆ ಸರಕಾರ ಭರಿಸಲಿದೆ. ಇಂದು ಬೀಫಾತುಮ್ಮ ಮನೆ ಸಮುದ್ರಪಾಲಾಗುತ್ತಿದ್ದಂತೆ ಅಲಿಮಮ್ಮ ಕುಟುಂಬದ 11 ಮಂದಿ ಹಾಗೂ ಸೌದಾ ಎಂಬವರ ಮನೆಯ 6 ಮಂದಿಯನ್ನು ಅವರ ಸಂಬಂಧಿಕರ ಮನೆಗೆ ಸ್ಥಳಾಂತರಗೊಳಿಸಲಾಗಿದೆ.
ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಮುದ್ರತೀರದ ಮನೆಮಂದಿ ಎಚ್ಚರಿಕೆಯಿಂದ ಇರಲು ಉಳ್ಳಾಲ ತಾಲೂಕು ತಹಶೀಲ್ದಾರ್ ಸೂಚಿಸಿದ್ದಾರೆ. ಅಗತ್ಯಬಿದ್ದಲ್ಲಿ ಅಪಾಯದಂಚಿನಲ್ಲಿ ಇರುವ ಇನ್ನಷ್ಟು ಮನೆಮಂದಿಗೆ ಬಾಡಿಗೆ ಮನೆಗಳನ್ನು ಗುರುತಿಸಿ ಮೂರು ತಿಂಗಳುಗಳ ಬಾಡಿಗೆಯನ್ನು ಸರಕಾರ ಭರಿಸಲಿದೆ ಎಂದಿದ್ದಾರೆ.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…