ಜನ ಮನದ ನಾಡಿ ಮಿಡಿತ

Advertisement

ಮೈಸೂರಿನಲ್ಲಿ ಎರಡು ಗುಂಪುಗಳ ನಡುವೆ ಗಲಭೆ; ಯುವ ಬ್ರಿಗೇಡ್​​ನ ಕಾರ್ಯಕರ್ತನ ಹತ್ಯೆ

ಮೈಸೂರು : ಎರಡು ಗುಂಪುಗಳ ನಡುವಿನ ಘರ್ಷಣೆ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಕೊಲೆಯಾದ ಯುವಕನನ್ನು ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಎಂದು ಗುರುತಿಸಲಾಗಿದೆ. ವೇಣುಗೋಪಾಲ್​ ಯುವ ಬ್ರಿಗೇಡ್​​ನ ಕಾರ್ಯಕರ್ತ ಎಂದು ತಿಳಿದುಬಂದಿದೆ.

ಶನಿವಾರ ಹನುಮ ಜಯಂತಿ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಸ್ಥಳದಲ್ಲಿದ್ದ ಕೆಲವರು ಉಭಯ ಗುಂಪುಗಳನ್ನು ಶಾಂತಗೊಳಿಸಲು ಪ್ರಯತ್ನಪಟ್ಟರು. ಇದಾದ ನಂತರ ಮತ್ತೆ ಗಲಾಟೆ ನಡೆದು ಓರ್ವನ ಕೊಲೆ ನಡೆದಿದೆ.

ಸ್ಥಳಕ್ಕೆ ಡಿವೈಎಸ್ ಪಿ. ಗೋವಿಂದರಾಜು, ನರಸೀಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ. ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಮೃತದೇಹವನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ನರಸೀಪುರ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ನೂರಾರು ಯುವಕರು ಜಮಾಯಿಸಿದ್ದರು.

ಚಕ್ರವರ್ತಿ ಸೂಲಿಬೆಲೆ ಆಸ್ಪತ್ರೆಗೆ ಭೇಟಿ : ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿದರು. ವೇಣುಗೋಪಾಲ್ ಕುಟುಂಬಕ್ಕೆ ಸಾಂತ್ವನ ಹೇಳಿದರು. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವಂತೆ ಒತ್ತಾಯಿಸಿದರು. ಘಟನೆ ಸಂಬಂಧ ಟಿ.ನರಸೀಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!