ಮೈಸೂರು : ಎರಡು ಗುಂಪುಗಳ ನಡುವಿನ ಘರ್ಷಣೆ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಕೊಲೆಯಾದ ಯುವಕನನ್ನು ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಎಂದು ಗುರುತಿಸಲಾಗಿದೆ. ವೇಣುಗೋಪಾಲ್ ಯುವ ಬ್ರಿಗೇಡ್ನ ಕಾರ್ಯಕರ್ತ ಎಂದು ತಿಳಿದುಬಂದಿದೆ.
ಶನಿವಾರ ಹನುಮ ಜಯಂತಿ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಸ್ಥಳದಲ್ಲಿದ್ದ ಕೆಲವರು ಉಭಯ ಗುಂಪುಗಳನ್ನು ಶಾಂತಗೊಳಿಸಲು ಪ್ರಯತ್ನಪಟ್ಟರು. ಇದಾದ ನಂತರ ಮತ್ತೆ ಗಲಾಟೆ ನಡೆದು ಓರ್ವನ ಕೊಲೆ ನಡೆದಿದೆ.
ಸ್ಥಳಕ್ಕೆ ಡಿವೈಎಸ್ ಪಿ. ಗೋವಿಂದರಾಜು, ನರಸೀಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ. ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಮೃತದೇಹವನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ನರಸೀಪುರ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ನೂರಾರು ಯುವಕರು ಜಮಾಯಿಸಿದ್ದರು.
ಚಕ್ರವರ್ತಿ ಸೂಲಿಬೆಲೆ ಆಸ್ಪತ್ರೆಗೆ ಭೇಟಿ : ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿದರು. ವೇಣುಗೋಪಾಲ್ ಕುಟುಂಬಕ್ಕೆ ಸಾಂತ್ವನ ಹೇಳಿದರು. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವಂತೆ ಒತ್ತಾಯಿಸಿದರು. ಘಟನೆ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಧ್ಯಮ ಲೋಕದಲ್ಲಿ ಅಚ್ಚಳಿಯದ ಸಾಧನೆಯನ್ನು ಮಾಡಿ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮಾಧ್ಯಮ ಆಡಳಿತ…
ಮಾಧ್ಯಮ ಲೋಕದಲ್ಲಿ ಸುದೀರ್ಘ ದುಡಿಮೆ ಮತ್ತು ತನ್ನ ಕಲಾತ್ಮಕ ಕ್ಯಾಮರಾ ಕೌಶಲ್ಯದಿಂದ ಜನಮನ ಸೆಳೆದಿದ್ದ ನಾಗರಾಜ್ ಇಂದು ನಿಧನರಾಗಿದ್ದಾರೆ. ಆರ್ಥಿಕ…
ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸ್ಕೂಟರ್ ಸವಾರನೋರ್ವನನ್ನು ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿ ನಿವಾಸಿ…
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…