ಕ್ರೈಮ್

ಮೈಸೂರಿನಲ್ಲಿ ಎರಡು ಗುಂಪುಗಳ ನಡುವೆ ಗಲಭೆ; ಯುವ ಬ್ರಿಗೇಡ್​​ನ ಕಾರ್ಯಕರ್ತನ ಹತ್ಯೆ

ಮೈಸೂರು : ಎರಡು ಗುಂಪುಗಳ ನಡುವಿನ ಘರ್ಷಣೆ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಕೊಲೆಯಾದ ಯುವಕನನ್ನು ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಎಂದು ಗುರುತಿಸಲಾಗಿದೆ. ವೇಣುಗೋಪಾಲ್​ ಯುವ ಬ್ರಿಗೇಡ್​​ನ ಕಾರ್ಯಕರ್ತ ಎಂದು ತಿಳಿದುಬಂದಿದೆ.

ಶನಿವಾರ ಹನುಮ ಜಯಂತಿ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಸ್ಥಳದಲ್ಲಿದ್ದ ಕೆಲವರು ಉಭಯ ಗುಂಪುಗಳನ್ನು ಶಾಂತಗೊಳಿಸಲು ಪ್ರಯತ್ನಪಟ್ಟರು. ಇದಾದ ನಂತರ ಮತ್ತೆ ಗಲಾಟೆ ನಡೆದು ಓರ್ವನ ಕೊಲೆ ನಡೆದಿದೆ.

ಸ್ಥಳಕ್ಕೆ ಡಿವೈಎಸ್ ಪಿ. ಗೋವಿಂದರಾಜು, ನರಸೀಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ. ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಮೃತದೇಹವನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ನರಸೀಪುರ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ನೂರಾರು ಯುವಕರು ಜಮಾಯಿಸಿದ್ದರು.

ಚಕ್ರವರ್ತಿ ಸೂಲಿಬೆಲೆ ಆಸ್ಪತ್ರೆಗೆ ಭೇಟಿ : ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿದರು. ವೇಣುಗೋಪಾಲ್ ಕುಟುಂಬಕ್ಕೆ ಸಾಂತ್ವನ ಹೇಳಿದರು. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವಂತೆ ಒತ್ತಾಯಿಸಿದರು. ಘಟನೆ ಸಂಬಂಧ ಟಿ.ನರಸೀಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

23 hours ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

2 days ago

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…

2 days ago

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…

4 days ago

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…

4 days ago

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…

4 days ago